ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಶಿಫಾರಸು
ಕೊಡತಗೇರಿ ಎಕ್ಸ್ಪ್ರೆಸ್ ಸುದ್ದಿ
ಬೆಂಗಳೂರು: ಕುರುಬ ಸಮುದಾಯವನ್ನು (Kuruba Community) ಪರಿಶಿಷ್ಟ ಪಂಗಡ (ST) ಸಮುದಾಯಕ್ಕೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಕಳುಹಿಸಲಾಗಿದೆ. ಈ ಹಿಂದೆ ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಇದ್ದ ಕಾಡು ಕುರುಬರನ್ನು ಮಾತ್ರವೇ ಎಸ್ಟಿ ಪಂಗಡಕ್ಕೆ ಸೇರಿಸಲಾಗಿತ್ತು. ಬಳಿಕ 2020-21ರಲ್ಲಿ ರಾಜ್ಯಾದ್ಯಂತ ಎಲ್ಲಾ ಕುರುಬ ಸಮುದಾಯದವರನ್ನು ಎಸ್ಟಿ ಸಮುದಾಯಕ್ಕೆ ಸೇರಿಸುವಂತೆ ನಿರಂಜನಾನಂದ ಪುರಿ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರು ಕಾಗಿನೆಲೆಯಿಂದ ಬೆಂಗಳೂರಿನವರೆಗೂ ಬೃಹತ್ ಪಾದಯಾತ್ರೆ ನಡೆಸಿದ್ದರು. ಈಗ ರಾಜ್ಯಾದ್ಯಂತ ಎಲ್ಲ ಕುರುಬ ಸಮುದಾಯದವರನ್ನು ಎಸ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.

More Stories
ರಾಜ್ಯದಲ್ಲಿ ಎಲೆಕ್ಷನ್ ಹಬ್ಬ: ಮೇ ತಿಂಗಳಲ್ಲಿ ಪಂಚಾಯತ್ ಚುನಾವಣೆ ಖಚಿತ!
ರಾಜ್ಯ ವಕೀಲರ ಪರಿಷತ್ ಚುನಾವಣೆ: ಬೆಳಗಾವಿಯ ಹಿರಿಯ ವಕೀಲ ಶಿವಪ್ಪ ಸಾದೆಪ್ಪ ಕಿವಾಡಸಣ್ಣವರ ಸ್ಪರ್ಧೆ
ಗ್ರಾಮ ಸಮರಕ್ಕೆ ಮುಹೂರ್ತ ಫಿಕ್ಸ್: ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ