ಒಬ್ಬರು ಗೆದ್ದು ಸಂತೋಷಪಡುವುದು ಸಂಸ್ಕಾರವಲ್ಲ. ಹಂಚಿ ತಿನ್ನೋದಷ್ಟೇ ನಾವು ಕಲಿತಿರೋದು”.
ಕೊಡತಗೇರಿ ಎಕ್ಸಪ್ರೆಸ್ ಸುದ್ದಿ
ಓರ್ವ ಮಾನವಶಾಸ್ತ್ರಜ್ಞ ಒಮ್ಮೆ ಆಫ್ರಿಕನ್ ಬುಡಕಟ್ಟು ಮಕ್ಕಳಿಗೆ ಆಟವೊಂದನ್ನು ಆಡಲು ತಿಳಿಸುತ್ತಾನೆ. ಆಟದ ನಿಯಮ ಏನಂದ್ರೆ ಮಕ್ಕಳಿಂದ ಅನತಿ ದೂರದಲ್ಲಿ ಮರವೊಂದಿರುತ್ತೆ. ಅದರ ಬುಡದಲ್ಲಿ ರುಚಿಕರವಾದ ಹಣ್ಣಿನ ಬುಟ್ಟಿಯೊಂದನ್ನು ಇಟ್ಟು, ಗುಂಪಿನಲ್ಲಿರುವ ಮಕ್ಕಳಲ್ಲಿ ಯಾರು ಮೊದಲು ಆ ಮರವನ್ನು ತಲುಪುತ್ತಾರೋ ಅವರಿಗೆ ಮಾತ್ರ ಆ ಬುಟ್ಟಿಯಲ್ಲಿರುವ ಹಣ್ಣುಗಳು ಸಿಗುತ್ತೆ ಎನ್ನುತ್ತಾನೆ.
ಮಕ್ಕಳು ನಡೆಯಲು ಆರಂಭಿಸುತ್ತಿದ್ದಂತೆ ಮಾನವಶಾಸ್ತ್ರಜ್ಞನಿಗೆ ಪರಮಾಶ್ಚರ್ಯ ಆಗುತ್ತೆ. ಯಾಕೆಂದರೆ ಆ ಮಕ್ಕಳು ಮರದೆಡೆಗೆ ಸ್ಪರ್ಧೆಯಿಂದ ಓಡುವ ಬದಲು, ಪರಸ್ಪರ ಕೈ ಕೈ ಹಿಡಿದು ಸೌಹಾರ್ದತೆಯಿಂದ ನಡೆದುಕೊಂಡೇ ಹೋಗಿ ಮರವನ್ನು ತಲುಪುತ್ತಾರೆ. ಹಾಗೆಯೇ ಬುಟ್ಟಿಯಲ್ಲಿದ್ದ ಹಣ್ಣುಗಳನ್ನು ಎಲ್ಲರೂ ಹಂಚಿಕೊಂಡು ತಿನ್ನುತ್ತಾರೆ!
ಆಗ ಮಾನವಶಾಸ್ತ್ರಜ್ಞ ನಾನು ಟಾಸ್ಕ್ ನೀಡಿದ್ದು ಯಾರು ಬೇಗನೆ ಮರವನ್ನು ತಲುಪುತ್ತೀರೋ ಅವರಿಗೆ ಮಾತ್ರ ಹಣ್ಣಿನ ಬುಟ್ಟಿ ಸಿಗುವುದು ಎಂದಲ್ಲವೇ ಎನ್ನುತ್ತಾನೆ?
ಆ ಮಕ್ಕಳು ಉತ್ತರಿಸುತ್ತಾರೆ: “ನಮ್ಮಲ್ಲಿ ಎಲ್ಲರೂ ಸಂಕಷ್ಟದಲ್ಲಿ ಇರುವುದರಿಂದ ಯಾರೋ ಒಬ್ಬರು ಗೆದ್ದು ಸಂತೋಷಪಡುವುದು ಸಂಸ್ಕಾರವಲ್ಲ. ಹಂಚಿ ತಿನ್ನೋದಷ್ಟೇ ನಾವು ಕಲಿತಿರೋದು”.
ಕೊನೆಗೆ ಆ ಮಾನವಶಾಸ್ತ್ರಜ್ಞನಿಗೆ ಈ ಪ್ರಯೋಗದಿಂದ ಗೊತ್ತಾಗಿದ್ದು; “ಬುಡಕಟ್ಟು ಜನರು ತಮನ್ನು ತಾವು ಸುಸಂಸ್ಕೃತ ಸಮಾಜವೆಂದು ಪರಿಗಣಿಸುವ ಸಂತೋಷದ ರಹಸ್ಯವನ್ನು ತಿಳಿದಿದ್ದಾರೆ” ಎಂಬುದು…!!

More Stories
ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ತಳಮಟ್ಟದ ನಾಯಕತ್ವ ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ಸಮಾರೋಪ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.
ರಕ್ಷಾ ಬಂಧನದ ರಾಖಿ: ಅದರ ಅರ್ಥ ಮತ್ತು ಮಹತ್ವ
ಥೈರಾಯ್ಡ್ಗೆ ಶಾಶ್ವತ ಪರಿಹಾರ