ಪ್ರಶಸ್ತಿಗಳು ಮಾರಾಟಕ್ಕಿವೆ : ಪತ್ರಕರ್ತ ಗೋವಿಂದ ರಾಜ

ಪ್ರಶಸ್ತಿಗಳು ಮಾರಾಟಕ್ಕಿವೆ : ಪತ್ರಕರ್ತ ಗೋವಿಂದ ರಾಜ

ಕೊಡತಗೇರಿ ಎಕ್ಸಪ್ರೆಸ್ ಸುದ್ದಿ

ಕೊಪ್ಪಳ : ಈ ಹಿಂದೆ ಪ್ರಶಸ್ತಿಗಳು ಸಮಾಜ ಮುಖಿ ಕೆಲಸಗಳನ್ನು ನೋಡಿ ಮತ್ತು ಅವರ ಸೇವೆಯನ್ನು ಗುರುತಿಸಿ ಪ್ರಶಸ್ತಿ ಗಳನ್ನು ನೀಡುತ್ತಿದ್ದರು .ಆದರೆ ಇಂದಿನ ಆಧುನಿಕ ಯುಗದಲ್ಲಿ ಪ್ರಶಸ್ತಿ ಗಳು ಮಾರಾಟ ಕ್ಕಿರುವದು ವಿಷಾದನೀಯ ಸಂಗತಿ ಎಂದು ಪತ್ರಕರ್ತ ಹಾಗೂ ಯುವ ಬರಹಗಾರ ಗೋವಿಂದ ರಾಜ್ ಬೂದಗುಂಪಾ   ಬೆಸರ ವ್ಯಕ್ತ ಪಡಿಸಿದರು. ಅವರು ನಿನ್ನೆ ನೆಡದ ರಾಜ್ಯಮಟ್ಟದ ಡಿ ವಿ ಗುಂಡಪ್ಪ ಪ್ರಶಸ್ತಿ ಸ್ವೀಕರಿಸಿ   ಮಾತನಾಡಿದರು.

ಅವರು  ಕೊಪ್ಪಳದ ತಾಲೂಕ ಪಂಚಾಯತ ಸಭಾಂಗಣದಲ್ಲಿ ಧ್ರುವ ಮೀಡಿಯಾ ಎಜುಕೇಶನ್ ಸಂಸ್ಥೆಯವರು ನಡೆಸಿದ ಪತ್ರಿಕಾ ದಿನಾಚರಣೆಯಲ್ಲಿ ಗೋವಿಂದರಾಜ್ ಬೂದುಗುಂಪ ಅವರಿಗೆ ರಾಜ್ಯಮಟ್ಟದ ಡಿ ವಿ ಗುಂಡಪ್ಪ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಗೋವಿಂದರಾಜ ಬುದಗುಂಪ ಪ್ರಶಸ್ತಿಗಳು ಮಾರಾಟಕ್ಕಿವೆ ಇಪ್ಪತ್ತು ಸಾವಿರ ರೂಪಾಯಿ ಕೊಟ್ಟರೆ ಡಾಕ್ಟರೇಟ್ ಕೊಡುತ್ತಾರೆ ಹೀಗಾಗಿ ಪ್ರಶಸ್ತಿಗಳಿಗೆ ಇದ್ದ ಗೌರವ ಕೂಡ ಕಡಿಮೆಯಾಗುತ್ತಿದೆ, ಆದರೆ ನನ್ನ ಜೀವಮಾನದಲ್ಲಿ ಈಗ ನನಗೆ ಕೊಡುತ್ತಿರುವುದು ಎರಡನೇ ಪ್ರಶಸ್ತಿ ಮೊದಲನೇದು ಚಾಲುಕ್ಯ ವಿಕ್ರಮಾದಿತ್ಯ ಪ್ರಶಸ್ತಿ ಮತ್ತು ಎರಡನೆಯದು ಈಗ ಪಡೆದಿರುವ ಡಿವಿ ಗುಂಡಪ್ಪ ಪ್ರಶಸ್ತಿ ಈ ಪ್ರಶಸ್ತಿಗಳು ನಾನು ಕೇಳದೆ ಯಾವುದೇ ಲಾಬಿ ಮಾಡದೆ ನನ್ನನ್ನು ಗುರುತಿಸಿ ಕೊಟ್ಟಂತ ಮತ್ತು ನನ್ನ ಗೌರವ ಹೆಚ್ಚಿಸಿದ ಪ್ರಶಸ್ತಿಗಳಾಗಿವೆ ಎಂದರು,

ಮುದ್ರಣ ಮಾಧ್ಯಮದ ಬಗ್ಗೆ ಮಾತನಾಡಿದ ಅವರು ಪತ್ರಕರ್ತರು ತಂತ್ರಜ್ಞಾನಕ್ಕೆ ಹೋಗಿಕೊಳ್ಳಬೇಕು ಇಲ್ಲದಿದ್ದರೆ ಭಾವಿ ಒಳಗಿನ ಕಪ್ಪೆಯಾಗುತ್ತಾರೆ, ಅಜ್ಜ ಹಾಕಿದ ಆಲದ ಮರದ ನೆರಳೆ ಸಾಕು ಎಂದರೆ ಏನು ಮಾಡಲು ಆಗುವುದಿಲ್ಲ ತಂತ್ರಜ್ಞಾನದ ಜೊತೆಗೆ ಮುದ್ರಣ ಮಾಧ್ಯಮವು ಹೊಂದಿಕೊಂಡು ಹೋಗಬೇಕು ಇಲ್ಲದಿದ್ದರೆ ಮುದ್ರಣ ಪತ್ರಿಕೆಗಳು ಜನರನ್ನು ತಲುಪಲು ಸಾಧ್ಯವಾಗುವುದಿಲ್ಲ,
ಕೆಲವು ಪತ್ರಿಕೆಯ ಸಂಪಾದಕರು ಡಿಜಿಟಲ್ ಮಾಧ್ಯಮದವರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಅದು ಸರಿಯಲ್ಲ ಡಿಜಿಟಲ್ ಮಾಧ್ಯಮದ ಜೊತೆ ಪೈಪೋಟಿ ಕೊಡಲಾಗದೆ ಈ ರೀತಿಯಾಗಿ ನಡೆದುಕೊಳ್ಳುತ್ತಿದ್ದಾರೆ, ಅವರು ಕೂಡ ಡಿಜಿಟಲ್ ಮಾಧ್ಯಮವನ್ನು ಬಳಸಿಕೊಳ್ಳಬೇಕು ಅದರಿಂದ ಹೆಚ್ಚು ಜನರೊಂದಿಗೆ ಸಂಪರ್ಕಗೊಳ್ಳಲು ಸಾಧ್ಯವಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು

ಕಾರ್ಯಕ್ರಮದಲ್ಲಿ ಹೆಬ್ಬಾಳ ಸಂಸ್ಥಾನ ಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಭಾಗವಹಿಸಿ ಪತ್ರಕರ್ತರ ಕಷ್ಟ ನಷ್ಟಗಳ ಬಗ್ಗೆ ವಿಸ್ತಾರವಾಗಿ ಮಾತನಾಡಿದರು,

ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡರಾದ ವೀರೇಶ್ ಮಾಂತಯ್ಯನ ಮಠ, ಕಾಂಗ್ರೆಸ್ ಮುಖಂಡರಾದ ಕೆ ಎಂ ಸಯ್ಯದ್, ಗಿರೀಶ್ ಹಿರೇಮಠ್, ಕೊಪ್ಪಳದ ಚುಟುಕುಗಳ ಬ್ರಹ್ಮ ಎಂದೇ ಖ್ಯಾತಿಗಳಿಸಿದ ಹನುಮಂತಪ್ಪ ಹಂಡಗಿ, ಪತ್ರಕರ್ತರಾದ ಸಾಧಿಕಲಿ, ಎಚ್ಎಸ್ ಹರೀಶ್, ಜಿಎಸ್ ಗೋನಾಳ್, ಕನ್ನಡಪರ ಹೋರಾಟಗಾರರಾದ ವಿಜಯಕುಮಾರ್ ಕವಲೂರು, ಮತ್ತು ವಕೀಲರಾದ ಕೆ ಎಸ್ ಕೊಡತಗೇರಿ, ಜಿ ಎಮ್ ಶಿವಪುರ, ಮತ್ತು ಕಾಟನ್ ಪಾಷಾ, ಅಲ್ಲಾಭಕ್ಷಿ ಚಳ್ಳಾರಿ ಅತಿಥಿಗಳಾಗಿ ಆಗಮಿಸಿದ್ದರು,

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!