ನಿಮ್ಮೂರಿನ ಋಣ ತೀರಿಸಲಾಗುವುದಿಲ್ಲ : ಶಿಕ್ಷಕ ದಾದ್ಮಿ

ನಿಮ್ಮೂರಿನ ಋಣ ತೀರಿಸಲಾಗುವುದಿಲ್ಲ : ಶಿಕ್ಷಕ ದಾದ್ಮಿ

ಕೊಡತಗೇರಿ ಎಕ್ಸಪ್ರೆಸ್ ಸುದ್ದಿ

ಗಜೇಂದ್ರಗಡ : ಸಮೀಪದ ಗೋಗೇರಿ ಸರಕಾರಿ ಪ್ರೌಢಶಾಲೆಯಲ್ಲಿ ಸುಮಾರು 15 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಶಿಕ್ಷಕ ಎನ್.ಜಿ.ದಾದ್ಮಿ ಹಾಗೂ ಶಿಕ್ಷಕಿ ಹವಳಪ್ಪನವರ್ ಬೀಳ್ಕೊಡು ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ದೈಹಿಕ ಶಿಕ್ಷಕ ಎನ್.ಜಿ.ದಾದ್ಮಿ ಮಾತನಾಡಿ ನಾನು ಮೊದಲು ಸರಕಾರಿ ನೌಕರಿಯನ್ನು ಇದೇ ಊರಿನಲ್ಲಿ ದೈಹಿಕ ಶಿಕ್ಷಕನಾಗಿ ಕಾರ್ಯನಿರ್ವಹಿಸಲು ಬಂದೇ ಅಲ್ಲಿಂದ ಇಲ್ಲಿಯವರೆಗೂ ನನ್ನನ್ನು ನಿಮ್ಮೂರಿನ ಮಗನಾಗಿ ನೋಡಿಕೊಂಡಿದ್ದೀರಿ, ನಿಮ್ಮೂರಿನ ಋಣವನ್ನ ಈ ಜನ್ಮದಲ್ಲಿ ತೀರಿಸಲಾಗುವುದಿಲ್ಲ ಎಂದು ಭಾವನಾತ್ಮಕವಾಗಿ ದೈಹಿಕ ಶಿಕ್ಷಕ ದಾದ್ಮಿಯವರು ಹೇಳಿದರು.

ನಾನು ಈ ಶಾಲೆಯಲ್ಲಿ ಸೇವೆ ಸಲ್ಲಿಸಲು ಬಂದು ಅನೇಕ ಕ್ರೀಡಾಪಟುಗಳನ್ನು ರಾಜ್ಯಮಟ್ಟದವರಿಗೆ ಆಡಿಸಲು ಪ್ರೇರೇಪಿಸಿದ್ದು ನನ್ನೂರಿನ ಗೋಗೇರಿಯ ಹಿರಿಯರು ಪಾಲಕರು ಮತ್ತು ಅನೇಕ ಯುವಕರು ನನಗೆ ಕೈಜೋಡಿಸಿದ್ದೀರಿ ನಾನು ಈ ಊರಿನಲ್ಲಿ ಇಷ್ಟು ದಿನ ಇರಲು ಸಹಕರಿಸಿದ್ದೀರಿ ನನಗೆ ಮಕ್ಕಳನ್ನು ಮತ್ತು ನಿಮ್ಮನ್ನು ಬಿಟ್ಟು ಹೋಗಲು ಕಷ್ಟವಾಗುತ್ತಿದೆ ಅನಿವಾರ್ಯವಾಗಿ ನಾನು ಈ ಊರಿನಿಂದ ನಿರ್ಗಮಿಸಬೇಕಾಗಿದೆ. ಆದರೆ ನನ್ನ ಜೀವ ಇರುವವರೆಗೂ ಕೂಡ ಈ ಊರನ್ನು ನಾನು ಮರೆಯುವುದಿಲ್ಲ ಮಕ್ಕಳನ್ನು ಮರೆಯುವುದಿಲ್ಲ ನನಗೆ ಸಮಯ ಸಿಕ್ಕಾಗ ನಾನು ಈ ಶಾಲೆಗೆ ಬಂದು ಮಕ್ಕಳಿಗೆ ಆಟವನ್ನು ಆಡಿಸುತ್ತೇನೆ ಎಂದರು. ನಂತರ ಶಿಕ್ಷಕಿ ಅವಳಪ್ಪನವರು ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವಳಪ್ಪನವರು ನಾನು ಶಿಕ್ಷಕಿಯಾಗಿ ಈ ಊರಿಗೆ ಬಂದು ಸೇವೆಯನ್ನು ಕೈಯಲು ನೀವೆಲ್ಲರೂ ಸಹಕರಿಸಿದ್ದಿರಿ ನಾನು 15 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದರು ಕೂಡ ನನ್ನನ್ನು ಯಾವುದೇ ಪಾಲಕರು ಬಂದು ಕೂಡ ಏನು ಅಂದಿಲ್ಲ ಅನೇಕ ಮಕ್ಕಳನ್ನು ಹೊಡೆದಿದ್ದೇನೆ ಬೈದಿದ್ದೇನೆ ಈ ಊರಿನ ಹಿರಿಯರು ಎಲ್ಲರೂ ನಮಗೆ ಸಹಕರಿಸಿದ್ದೀರಿ ಅದಕ್ಕೆ ಧನ್ಯವಾದಗಳು ಎಂದು ಊರಿನ ನಡುವಿನ ಸಂಬಂಧ ವನ್ನು ನೆನಪಿಸಿಕೊಂಡು ಕಣ್ಷಿರು ಹಾಕಿದರು.
ಈ ಮೊದಲು ಗ್ರಾಮಸ್ಥರಾದ ಹೇಮಾಪತಿ ಭೋಸಲೆ, ಕೆ.ಎಸ್.ಕೊಡತಗೇರಿ,ಬಸವರಾಜ ಮೂಲಿಮನಿ, ಬಸವರಾಜ ಮಾದರ ಅವರು ಮಾತನಾಡಿದರು.
ಮಕ್ಕಳು ಕೂಡ ಮಾತನಾಡಿ ಶಿಕ್ಷಕರ ಮತ್ತು ಶಿಕ್ಷಕಿಯರ ಸಂಬಂಧವನ್ನು ನೆನದು ಕಣ್ಣಿರು ಹಾಕಿದರು.
ನಂತರ ದೈಹಿಕ ಶಿಕ್ಷಕ ಎನ್.ಜಿ. ದಾದ್ಮಿ ಅವರು ಸರ್ಕಾರಿ ಪ್ರಾಥಮಿಕ ಶಾಲೆ ಗೋಗೇರಿ ಸರಕಾರಿ ಪ್ರೌಢಶಾಲೆ ಗೋಗೇರಿ ಬಿಸಿಯೂಟದ ಸಿಬ್ಬಂದಿಗಳಿಗೆ ಎಲ್ಲರನ್ನು ಸನ್ಮಾನಿಸಿ ಗೌರವಿಸಿ ಅವರ ಜೊತೆ ಇದ್ದ ಒಡನಾಟವನ್ನು ನೆನೆದು ಕಣ್ಣೀರು ಹಾಕಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಎಸ್ ರಾಜು ರವರು ಮಾತನಾಡಿದರು ಮತ್ತು ಬಳಗೇರ್ ಶಿಕ್ಷಕರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸ್ವಾಗತವನ್ನು ಶಿಕ್ಷಕ ಪರಶುರಾಮ ಹೋರಪೇಟಿಯವರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಕಳಕಪ್ಪ ಬೋಸ್ಲೆ. ಕಟ್ಟಪ್ಪ ಮಾದರ್, ಶಂಕ್ರಯ್ಯಜ್ಜ ಮೇಟಿ ಮಠ ,ಉಪಸ್ಥಿತರಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್‌ಡಿ.ಎಂ.ಸಿ ಅಧ್ಯಕ್ಷರಾದ ಪರಶುರಾಮ್ ಚವಡಿ ವಹಿಸಿಕೊಂಡಿದ್ದರು ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಶಿಕ್ಷಕಿಯರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!