ಖಾಸಗಿ ಜಮೀನಿನ ‘ಬಂಡಿದಾರಿ’ಕಾಲುದಾರಿ’ಗಳ ಒತ್ತುವರಿ ತೆರವುಗೊಳಿಸಿ ತಹಶೀಲ್ದಾರ್ ಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ

ಖಾಸಗಿ ಜಮೀನಿನ ‘ಬಂಡಿದಾರಿ’ಕಾಲುದಾರಿ’ಗಳ ಒತ್ತುವರಿ ತೆರವುಗೊಳಿಸಿ ತಹಶೀಲ್ದಾರ್ ಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ

KODATAGERI EXPRESS NEWS

ಬೆಂಗಳೂರು;ರೈತರು ವ್ಯವಸಾಯದ ಉದ್ದೇಶಕ್ಕಾಗಿ ಓಡಾಡಲು ಬಳಸುವ ಖಾಸಗಿ ಜಮೀನು ಗಳಲ್ಲಿ ಕಾಲುದಾರಿ, ಬಂಡಿದಾರಿ ಖಾಸಗಿ ಜಮೀನಿನ ಮಾಲೀಕರು ಮುಚ್ವಿದ್ದರೆ, ಅಂತಹ ದಾರಿಗಳನ್ನು ತೆರವುಗೊಳಿಸಿ ಸುಗಮ ಓಡಾಟಕ್ಕೆ ಅವಕಾಶ ಕಲ್ಪಿಸುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಒಂದು ವೇಳೆ ದಾರಿ ನಕಾಶೆಯಲ್ಲಿ ಇದ್ದು ಒತ್ತುವರಿಯಾಗಿದ್ರೆ, ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ತೆರವುಗೊಳಿಸಲು ಸರ್ಕಾರ ಸುತ್ತೋಲೆ ಮೂಲಕ ಸೂಚನೆ ನೀಡಿದೆ.ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಮ್ಮ.ಸಿ ಅವರು ಸುತ್ತೋಲೆಯನ್ನು ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳಿಗೆ, ಕಂದಾಯ ಆಯುಕ್ತರಿಗೆ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿ ಸಮಸ್ಯೆ ಇದ್ದು, ಬಳಕೆದಾರರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಅಂತ ಹೇಳಿದ್ದಾರೆ.

ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ಯಾಗ್ಯೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಆಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದು ಕಂಡುಬರುತ್ತದೆ.ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ ‘ದಾರಿಯ ಹಕ್ಕುಗಳು ಮತ್ತು ಇತರ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ನಲ್ಲಿ ನಮೂದು ಮಾಡಲು ಅವಕಾಶವಿದೆ.

ಈ ಎಲ್ಲಾ ಕಾರಣಗಳಿಂದ ಕರ್ನಾಟಕ ಭೂ ಕಂದಾಯ ನಿಯಮಗಳು 1966ರ ನಿಯಮ 59ರಲ್ಲಿ ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತೆಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭಗಳ ದಾಖಲೆ ರಿಜಿಸ್ಟರ್ ನಲ್ಲಿ ನಮೂದು ಮಾಡಲು ಅವಕಾಶವಿರುತ್ತದೆ ಅಂತ ತಿಳಿಸಿದ್ದಾರೆ.ತಾಲ್ಲೂಕಿನ ತಹಶೀಲ್ದಾರರು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿಪಡಿಸುವಂತಹ ಅಥವಾ ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ, ಅಂತಹ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದ್ದಾರೆ.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!