ಕೊಪ್ಪಳದಲ್ಲಿ ಬಾಲಕಿ ಸಾವು; ಕಲುಷಿತ ನೀರು ಸೇವನೆ ಕಾರಣ ಶಂಕೆ

ಕೊಪ್ಪಳದಲ್ಲಿ ಕಲುಷಿತ ನೀರು ಸೇವನೆಯಿಂದ ಮತ್ತೊಂದು ಸಾವು ಸಂಭವಿಸಿದೆ ಎನ್ನಲಾಗುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯವೆಂದು ಆರೋಪಿಸಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಬಾಲಕಿ ಸಾವು ಪ್ರಕರಣಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟ ಪ್ರಕರಣ ಇತ್ತೀಚೆಗೆ ನಡೆದಿತ್ತು.

ಇದೇ ರೀತಿಯ ಘಟನೆ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ಸಂಭವಿಸಿದೆ. ಕಲುಷಿತ ನೀರು ಸೇವಿಸಿ ವಾಂತಿ, ಭೇದಿ ಉಂಟಾಗಿ ಬಾಲಕಿ ಅಸುನೀಗಿದ್ದಾಳೆ ಎಂದು ಶಂಕಿಸಲಾಗಿದೆ. ನಿರ್ಮಲಾ ಬೆಳಗಲ್‌ (10) ಮೃತಪಟ್ಟ ಬಾಲಕಿ.

ಕಳೆದ ರಾತ್ರಿ ಬಾಲಕಿಗೆ ವಾಂತಿ, ಬೇಧಿ ಆಗಿತ್ತು. ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗಿರಲಿಲ್ಲ. ಪೋಷಕರು ಇಂದು ಬೆಳಗ್ಗೆ ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಮನೆಯಲ್ಲಿಯೇ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಾಲಕಿ, ಆಸ್ಪತ್ರೆಗೆ ಕರೆತರುವ ಮುನ್ನವೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಬಾಲಕಿಯನ್ನು ಅತ್ತೆ ಮನೆಯಲ್ಲಿ ಬಿಟ್ಟು ಆಕೆಯ ತಂದೆ-ತಾಯಿ ಕೇರಳಕ್ಕೆ ಹೋಗಿದ್ದರು. ಕುಡಿಯುವ ನೀರಿನಿಂದಲೇ ವಾಂತಿ, ಬೇಧಿಯಾಗಿದೆ ಎಂದು ಬಾಲಕಿಯ ಅತ್ತೆ ಹನುಮವ್ವ ಹೇಳಿದರು. ಇದೇ ಗ್ರಾಮದಲ್ಲಿ ಈಗಾಗಲೇ ಕಲುಷಿತ ನೀರು ಸೇವಿಸಿ 15ಕ್ಕೂ ಹೆಚ್ಚು ಜನ‌ರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ಧಾರೆ. ಘಟನೆಗೆ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯವೆಂದು ಆರೋಪಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಹೆಚ್‌ಒ ಪ್ರತಿಕ್ರಿಯೆ: ಕುಷ್ಟಗಿ ತಾಲೂಕ ಬಿಜಕಲ್ ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಲಕಾನಂದ ಭೇಟಿ ನೀಡಿ ಪರಿಶೀಲನ ನಡೆಸಿದರು. ”3000 ಜನಸಂಖ್ಯೆ ಇರುವ ಗ್ರಾಮದಲ್ಲಿ ಕುಡಿಯಲು ನೀರು ಯೋಗ್ಯವಾಗಿಲ್ಲ. ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಕುಡಿಯಲು ಸೂಚನೆ ನೀಡಲಾಗಿತ್ತು. ಆದರೆ, ಮನೆ ಬಳಕೆಗೆಂದು ಇದೇ ಬೋರ್​ವೆಲ್​ ನೀರು ಬಿಡಿಸಿಕೊಂಡಿದ್ದಾರೆ. ಇದೀಗ ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ಆರಂಭಿಸಲಾಗಿದೆ. ಇಲ್ಲಿಗೆ ಬರುವ ರೋಗಿಗಳಿಗೆ ಪರೀಕ್ಷೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಎಲ್ಲ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಪರೀಕ್ಷೆ ಮಾಡಲಾಗುತ್ತಿದೆ. ಬಾಲಕಿಯ ಸಾವಿನ ನಿಖರ ಕಾರಣವೇನು ಎನ್ನುವುದರ ಬಗ್ಗೆ ತಜ್ಞರು ವರದಿ ನೀಡಲಿದ್ದಾರೆ” ಎಂದು ಅವರು ಹೇಳಿದರು.

ಗ್ರಾಮ ಪಂಚಾಯತಿ ನಿರ್ಲಕ್ಷ್ಯ ಆರೋಪ: ”ಬಿಜಕಲ್ ಗ್ರಾಮದಲ್ಲಿ ಬಾಲಕಿ ಸಾವಿಗೆ ಕುಡಿಯುವ ನೀರಿನ ಪೈಪ್​ಲೈನ್​ಗೆ ಚರಂಡಿ ನೀರು ಸೇರಿದ್ದೇ ಕಾರಣ. ಐದಾರು ವರ್ಷದಿಂದ ಇದೇ ನೀರು ಕುಡಿಯುತ್ತಿದ್ದೇವೆ. ನಮಗೆ ತೊಂದರೆಯಾಗಿಲ್ಲ. ಆದರೆ, ಇತ್ತೀಚೆಗೆ ಪೈಪ್​ಲೈನ್ ಒಡೆದಾಗ ಗ್ರಾಮ ಪಂಚಾಯತ್ ದುರಸ್ತಿ ಮಾಡಿಲ್ಲ. ಪೈಪ್​ಲೈನ್ ಮೂಲಕ ಕೊಳಚೆ ನೀರು ಸೇರಿದೆ. ಅದನ್ನೇ ಕುಡಿಯಲು ಬಳಸುತ್ತಿದ್ದಾರೆ. ಹೀಗಾಗಿ, ಗ್ರಾಮ ಪಂಚಾಯತಿ ನಿರ್ಲಕ್ಷ್ಯವೇ ಘಟನೆಗೆ ಕಾರಣವಾಗಿದೆ” ಎಂದು ಗ್ರಾಮಸ್ಥರು ದೂರಿದ್ದಾರೆ.

ಬಾಲಕಿಯ ಕುಟುಂಬಕ್ಕೆ ಗ್ರಾಮ ಪಂಚಾಯತಿಯವರೇ ಪರಿಹಾರ ನೀಡಬೇಕು ಎಂದು ಕೂಡ ಆಗ್ರಹಿಸಿದ್ದಾರೆ. ಮೊದಲೆರಡು ಸಾವುಗಳಿಗೆ ಕಲುಷಿತ ನೀರು ಸೇವನೆ ಕಾರಣವಲ್ಲ ಎಂದು ಮಾಧ್ಯಮದವರಿಗೆ ಹೇಳಿದ್ದ ಆರೋಗ್ಯ ಇಲಾಖೆ, ಬಾಲಕಿಯ ಸಾವಿಗೆ ಕಾರಣ ಏನು ಹೇಳುತ್ತದೆ ಎಂಬುದನ್ನು ಕಾದು ನೋಡಬೇಕು.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!