ಡಿ.೨೫ ರಂದು ಗಜೇಂದ್ರಗಡದಲ್ಲಿ ಕನಕದಾಸ ಜಯಂತಿ ಆಚರಣೆ.

 ಡಿ.೨೫ ರಂದು ಗಜೇಂದ್ರಗಡದಲ್ಲಿ ಕನಕದಾಸ ಜಯಂತಿ ಆಚರಣೆ.

ಕೊಡತಗೇರಿ ಎಕ್ಸ್‌ಪ್ರೆಸ್‌ ಸುದ್ದಿ
ಗಜೇಂದ್ರಗಡ::

ಡಿಸೆಂಬರ್ ತಿಂಗಳ ೨೫ ನೇ ತಾರೀಖಿನಂದು ದಾಸ ಶ್ರೇಷ್ಠ ಭಕ್ತ ಕನಕದಾಸರ ೫೩೬ ನೇ ಜಯಂತೋತ್ಸವವನ್ನು ನಗರದ ಬಾಬು‌ ಜಗಜೀವನರಾವ ಭವನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದು ಹಿರಿಯ ನ್ಯಾಯವಾದಿ ವಿ.ಆರ್.ಗುಡಿಸಾಗರ ಹೇಳಿದರು.

ನಗರದ ರೋಣ ರಸ್ತೆಯಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಗಜೇಂದ್ರಗಡ ಹಾಗೂ ರೋಣ ತಾಲೂಕಿನ ಕುರುಬರ ಸಂಘದಿಂದ ಬೃಹತ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಂಜಾನೆ ೧೦ ಗಂಟೆಗೆ ನಗರದ ಗರಡಿ ಮನೆಯಿಂದ ನಾಡಿನ ವಿವಿಧ ಕಡೆಗಳಿಂದ ಆಗಮಿಸಿದ ಡೊಳ್ಳು ಕುಣಿತ , ಸಕಲ ವಾದ್ಯಗಳೊಂದಿಗೆ ಮಹಿಳೆಯರು ಕುಂಭ ಕಳಸ ಹೊತ್ತು ಭಕ್ತ ಕನಕದಾಸರ ಭಾವಚಿತ್ರದ ಭವ್ಯ ಮೆರವಣಿಗೆ ಸಾಗಲಿದೆ. ಸು.೧೧:೪೫ ಕ್ಕೆ ಬಾಬು ಜಗಜೀವನರಾವ್ ಭವನಕ್ಕೆ ತೆರಳಿ ವೇದಿಕೆ ಕಾರ್ಯಕ್ರಮ ಜರುಗುವುದು.

ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಪರಮಪೂಜ್ಯ ಶ್ರೀ ಬಸವರಾಜ ದೇವರು, ಪರಮಪೂಜ್ಯ ಶ್ರೀ ಶಿವಸಿದ್ದೇಶ್ವರ‌ ಮಹಾಸ್ವಾಮಿಗಳು, ಪರಮಪೂಜ್ಯ ಶ್ರೀ ಷಣ್ಮುಖಪ್ಪಜ್ಜ ಧರ್ಮರ ಇವರು ವಹಿಸಲಿದ್ದಾರೆ.
ಕಾರ್ಯಕ್ರಮವನ್ನು ರೋಣ ಶಾಸಕ ಜಿ.ಎಸ್.ಪಾಟೀಲ ಉದ್ಘಾಟಿಸುವರು, ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆಯನ್ನು ಮಿಥುನ ಪಾಟೀಲ ಹಾಗೂ ಸಂಗೊಳ್ಳಿ ರಾಯಣ್ಣರವರ ಭಾವಚಿತ್ರಕ್ಕೆ ಮಾಲಾರ್ಪಣೆಯನ್ನು ಎಚ್.ಎಸ್.ಸೋಂಪೂರ ನೆರವೇರಿಸುವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿ.ಆರ್.ಗುಡಿಸಾಗರ ವಹಿಸಲಿದ್ದಾರೆ. ಇನ್ನೂ ಪ್ರಾಸ್ತಾವಿಕವಾಗಿ ಗಜೇಂದ್ರಗಡ ತಾಲೂಕಾ ಕುರುಬರ ಸಂಘದ ಅಧ್ಯಕ್ಷರಾದ ಅಂದಪ್ಪ ಬಿಚ್ಚೂರ ಮಾತನಾಡಲಿದ್ದಾರೆ.ಕಾರ್ಯಕ್ರಮ‌ ನಿರೂಪಣೆಯನ್ನು ತಾಲೂಕಾ ಪ್ರದಾನ ಕಾರ್ಯದರ್ಶಿಗಳಾದ ಕೆ.ಎಸ್.ಕೊಡತಗೇರಿ ನಡೆಸಿಕೊಡಲಿದ್ದಾರೆ ಕಾರ್ಯಕ್ರಮಕ್ಕೆ ನಾಡಿನ ಹಾಗೂ ತಾಲೂಕಿನ ಗಣ್ಯ ವ್ಯಕ್ತಿಗಳು ಅಥಿತಿಗಳಾಗಿ ಭಾಗಿಯಾಗಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಚ್.ಎಸ್.ಸೋಂಪೂರ, ಅಂದಪ್ಪ ಬಿಚ್ಚೂರ, ಕೆ.ಎಸ್.ಕೊಡತಗೇರಿ, ಕಾಂಗ್ರೆಸ್ ಪಕ್ಷದ ಸೇವಾದಳದ ಜಿಲಾಧ್ಯಕ್ಷರಾದ ಬಸವರಾಜ ಬೆನಕನವಾರಿ, ರಾಮಚಂದ್ರ ಹುದ್ದಾರ, ಶರಣಪ್ಪ ಕೆಂಪನಾಳ ಅಶೋಕ ವದೇಗೋಳ, ಸೇರಿದಂತೆ ಅನೇಕರು

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!