ತಿಂಥಣಿ ಬ್ರಿಜ್ನಲ್ಲಿ ಜ.12ರಿಂದ ‘ಹಾಲುಮತ’ ಸಂಸ್ಕೃತಿ ವೈಭವ : ಕೆ.ರಾಜಶೇಖರ್ ಹಿಟ್ನಾಳ

 

 

ಕೊಪ್ಪಳ :

 

ಇದೇ ಜ.12, 13 ಮತ್ತು 14 ರಂದು ಸತತ ಮೂರು ದಿನಗಳ ಕಾಲ “ಹಾಲುಮತ” ಗತ ವೈಭವವನ್ನು ನೆನಪಿಸುವ ‘ಹಾಲುಮತ ಸಂಸ್ಕೃತಿ ವೈಭವ’ವನ್ನು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ನಲ್ಲಿ ಆಯೋಜಿಸಲಾಗಿದೆ ಎಂದು ಕೊಪ್ಫಳ ಜಿ.ಪಂ ಮಾಜಿ ಅಧ್ಯಕ್ಷ ಕೆ.ರಾಜಶೇಖರ್ ಹಿಟ್ನಾಳ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜ.11 ಗುರುವಾರ ಸಂಜೆ 07 : 30ಕ್ಕೆ ಬಂಡಾರ, ಕಂಬಳಿ ಪೂಜೆ, ಡೊಳ್ಳಿನ ಗಾಯನದೊಂದಿಗೆ ಹಾಲುವತ ಸಾಹಿತ್ಯ ಪ್ರಥಮ ಕಮ್ಮಟ ನಿತ್ಯ ಬೆಳಿಗ್ಗೆ 10 ರಿಂದ 12 ಮತ್ತು ಸಂಜೆ 4 ರಿಂದ 6 ಗಂಟೆಯವರಗೆ ಆರಂಭಿಸಲಾಗುತ್ತದೆ.

12 ಶುಕ್ರವಾರ ಮುಂಜಾನೆ 7 ಗಂಟೆಗೆ ಹೊಳೆಪೂಜೆ, ಪಲ್ಲಕ್ಕಿ ಮೆರವಣಿಗೆ, ಅಭಿಷೇಕ, 11 ಗಂಟೆಗೆ ಹಾಲುಮತ ಧರ್ಮ ಧ್ವಜಾರೋಹಣ, ಸಾವಯವ ಕೃಷಿ ಉತ್ಪನ್ನ ಸಿರಿಧಾನ್ಯ, ಹಾಲುಮತ ಸಾಹಿತ್ಯ, ಉಚಿತ ನೇತ್ರದಾನ ಹಾಗೂ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ.12 :00 ಯುವಜನ ಸಮಾವೇಶ, ರಾತ್ರಿ 9 :00 ಗಂಟೆಗೆ ಶ್ರೀ ರೇಣುಕಾ ಯಲ್ಲಮ್ಮ ನಾಟಕ ಪ್ರದರ್ಶನವಾಗಲಿದೆ.

 

ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಆಗಮನ

 

ಜ.13 ರಂದು ಮುಖ್ರಮಂತ್ರಿ ಸಿದ್ಧರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಹಸ್ರ ಹೊನ್ನವರೆ ಪುಷ್ಪಾರ್ಚನೆ, ಭಕ್ತರಿಂದ ಭಂಡಾರ, ಮಡಿ ಉಣ್ಣೆ ಅರ್ಪಣೆ, ಹಾಲುಮತ ಭಾಸ್ಕರ, ಕನಕ ರತ್ನ, ಸಿದ್ಧಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿದ್ಯಾರ್ಥಿ ನಿಲಯ ಭೂಮಿ ಪೂಜೆ ನಡೆಯಲಿದೆ. ಸಂಜೆ 4 ಘಂಟೆಗೆ ಟಗರುಗಳ ಕಾಳಗ, ರಾತ್ರಿ 9 ಕ್ಕೆ ಶ್ರೀ ಬೀರಲಿಂಗೇಶ್ವರ ಮಹಿಮೆ ನಾಟಕ ಪ್ರದರ್ಶನ ಕಾಣಲಿದೆ.

 

ಸಮಾರೋಪ ಸಮಾರಂಭ

 

ಜ.14 ಭಾನುವಾರದಂದು ರಾಜ್ಯದ ನಾನಾ ಭಾಗದಿಂದ ಮಾಜಿ ಸಚಿವರು, ಮಾಜಿ, ಹಾಲಿ ಶಾಸಕರು ಸೇರಿದಂತೆ ಅನೇಕ ಸಮಾಜ ಹಿರಿಯ ಮುಖಂಡರು ಸಮಾರೋಪ ಸಮಾರಂಭಕ್ಕೆ ಆಗಮಿಸುವರು.

ಅಂದು ಮುಂಜಾನೆ 6 ಗಂಟೆಗೆ ಶ್ರೀ ಬೀರಲಿಂಗೇಶ್ವರನಿಗೆ ಮೇಷಾಮೃತ ಅಭಿಷೇಕ, ವಿವಿಧ ವಿಧಿ ವಿಧಾನಗಳೊಂದಿಗೆ ಸಹಸ್ರ ಅರ್ಚನಾ ಪೂಜೆ, ‘ಹಾಲುಮತ ಮಾತೃಶಕ್ತಿ’ ಸಮಾವೇಶ, ಮಧ್ಯಾಹ್ನ 2 : 30ಕ್ಕೆ ಎತ್ತುಗಳ ಭಾರ ಎಳೆಯುವ ಸ್ಪರ್ಧೆ ಏರ್ಪಡಲಿದೆ. ತಿಂಥಣಿ ಬ್ರಿಜ್ ಹಾಲುಮತದ ಈ ಸಮಾವೇಶದಲ್ಲಿ ಪ್ರತಿದಿನ ಸುಮಾರು 30 ಸಾವಿರಕ್ಕೂ ಅಧಿಕ ಬಾಂಧವರು ಸೇರುವ ನಿರೀಕ್ಷೆ ಇದೆ, ಹೀಗಾಗಿ ಪ್ರತಿಯೊಬ್ಬರು ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿ ಮಾಡಬೇಕು ಎಂದು ಕೆ.ರಾಜಶೇಖರ್ ಹಿಟ್ನಾಳ ಮನವಿ ಮಾಡಿಕೊಂಡರು. ಯಲಬುರ್ಗಾ ತಾಲೂಕ ಕುರುಬರ ಸಮಾಜದ ಅಧ್ಯಕ್ಷ ವೀರನಗೌಡ ಬಳೂಟಗಿ, ಜಿಲ್ಲಾಧ್ಯಕ್ಷ ಹನುಮಂತಪ್ಪ ಕೌದಿ, ಮಾರುತಿ ಗೊಂದಿ, ದ್ಯಾಮಣ್ಣ ಕರಿಗಾರ, ಶಿವಣ್ಣ ರಾಜೂರು, ಆನಂದ್ ಕಿನ್ನಾಳ, ಪರಶುರಾಮ್ ಅಣ್ಣಿಗೇರಿ, ಅಂದನ ಸ್ವಾಮಿ ಭೂತಣ್ಣವರ, ಹನುಮಂತಪ್ಪ ಅಬ್ಬಿಗೇರಿ ಹಲಗೇರಿ ಸೇರಿದಂತೆ ಹಾಲುಮತ ಸಮಾಜದ ಅನೇಕ ಮುಖಂಡರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!