ವಿದ್ಯಾರ್ಥಿ ಗಳು ಯಶಸ್ಸು ಗಳಿಸಲು ಕಠಿಣ ಶಿಕ್ಷಣ ಅವಶ್ಯ : ಎಚ್.ಎಂ.ಭೋಸಲೆ

ವಿದ್ಯಾರ್ಥಿ ಗಳು ಯಶಸ್ಸು ಗಳಿಸಲು ಕಠಿಣ ಶಿಕ್ಷಣ ಅವಶ್ಯ : ಎಚ್.ಎಂ.ಭೋಸಲೆ

ಕೊಡತಗೇರಿ ಎಕ್ಸಪ್ರೇಸ್ ಸುದ್ದಿ
ಗಜೇಂದ್ರಗಡ :
ಜೀವನದಲ್ಲಿ ವಿದ್ಯಾರ್ಥಿಗಳು ಅತ್ಯಂತ ಕಠಿಣ ಪರಿಶ್ರಮ ಪಡಬೇಕು ಅಂದಾಗ ಮಾತ್ರ ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಮುಟ್ಟಲು ಮತ್ತು ಯಶಸ್ಸು ಗಳಿಸಲು ಸಾಧ್ಯ ಎಂದು ಶಿಕ್ಷಣ ಪ್ರೇಮಿ ಎಚ್.ಎಂ.ಭೋಸಲೆ ಹೇಳಿದರು.
ಅವರು ಸರಕಾರಿ ಪ್ರೌಢ ಶಾಲೆ ಗೋಗೇರಿ ಯಲ್ಲಿ ಈ ಹಿಂದೆ ಮುಖ್ಯೋಫಧ್ಯಾಯರಾದ ಸೇವೆ ಸಲ್ಲಿಸಿದ ಕೆ.ಎಸ್.ರಾಜೂರ ಅವರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ನಂತರ ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಶಿಗೇರಿ ಸರಕಾರಿ ಪ್ರೌಢ ಶಾಲೆಯ ಪ್ರಾಚಾರ್ಯರಾದ ಕೆ.ಎಸ್.ರಾಜೂರ ಅವರು ಮಾತನಾಡಿ ವಿದ್ಯಾರ್ಥಿಗಳು ಓದಬೇಕು ಓದಿನಿಂದ ಅಭಿವೃದ್ಧಿ ಹೊಂದಲು ಸಾಧ್ಯ ಎಂದ ಅವರು ನಾನು ಈ ಊರಿನಲ್ಲಿ ಸೇವೆ ಸಲ್ಲಿಸಿದಾಗ ಎಲ್ಲಾ ಹಿರಿಯರು ಸಹಕರಿಸಿದ್ದಿರಿ ಅವರ ಋಣ ಎಂದು ನಾನು ತಿರಿಸಲು ಸಾಧ್ಯವಿಲ್ಲಾ ಎಂದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ರಾದ ಶ್ರೀಮತಿ ಟಿ.ಸಿ. ನಾಗನೂರ ಮೇಡಂ ಮಾತನಾಡಿ ಈ ಊರಿನಲ್ಲಿ ನಾನು ಮುಖ್ಯೋಪಾಧ್ಯಾಯ ಸೇವೆ ಸಲ್ಲಿಸಲು ಬಂದಿರುವದು ನನ್ನ ಭಾಗ್ಯ ಎಂದ ಅವರು . ನಾನು ಶಾಲೆಯಲ್ಲಿ ಸೇವೆಸಲ್ಲಿಸಲು ಬಂದಿದ್ದೇನೆ ನನ್ನ ಕೈಯಲ್ಲಿ ವಿದ್ಯಾರ್ಥಿಗಳಾದವರು ಇಂದಿನ ಸಮಾಜದಲ್ಲಿ ಗಣ್ಯಮಕ್ಕಳಾಗಿ ಬೇಳದಿರುವದು ನನಗೆ ಸಂತಸ ತಂದಿದೆ ನನ್ನ ಸ್ವಂತ ಮಕ್ಕಳು ಕೂಡ ಇಷ್ಟು ಗೌರವ ಕೊಡುತ್ತಾರೆ ಇಲ್ಲವೋ ಗೊತ್ತಿಲ್ಲಾ ಆದರೆ ನನ್ನ ಸ್ವಂತ ಮಕ್ಕಳಗಿಂತ ಹೆಚ್ಚು ನನ್ನ ಕೈಯಲ್ಲಿರುವ ಮಕ್ಕಳು ನನಗೆ ಗೌರವ ಕೊಡುತ್ತಿರುವದು ನನಗೆ ಗೌರವ ತಂದಿದೆ . ನಾನು ಹೆಚ್ಚಿನ ರೀತಿಯಲ್ಲಿ ಶ್ರಮ ಪಟ್ಟು ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಲು ಶ್ರಮೀಸುತ್ತೇನೆ ಎಂದರು
ಕಾರ್ಯಕ್ರಮದಲ್ಲಿ ವಕೀಲರಾದ ಕೆ.ಎಸ್.ಕೊಡತಗೇರಿ , ಮುಖಂಡರಾದ ಮಲ್ಲಿಕಾರ್ಜುನ ಗಾರಗಿ,ಗ್ರಾ.ಪಂ.ಸದಸ್ಯರಾದ ಇಮಾಮಸಾಬ ಬಾಗವಾನ, ಕಟ್ಟೆಪ್ಪ ಮಾದರ, ಗುತ್ತಿಗೆದಾರರು ಆದ ಮುದಿಯಪ್ಪ ಮುಧೋಳ. ಎಸ್.ಬಿ.ಡೋಳ್ಳಿನವರು, ಶರಣಪ್ಪ ಭೋಸಲೆ, ಸಂಭಾಜಿ ಭೋಸಲೆ, ಯಂಕಪ್ಪ ಭೋಸಲೆ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರಾದ ಎಸ್.ಬಿ.ಚಳಗೆರಿ ಬಸವರಾಜ ಮಾದರ.ಸೇರಿದಂತೆ ಶಾಲೆಯ ಶಿಕ್ಷಕಿಯರಾದ ಡಿ.ಎಸ್.ಕುಸಗಲ್ಲರವರು, ಎಂ.ಬಿ.ಬಿರಾದರ.ಶಿಕ್ಷಕರಾದ ಎಂ.ಎಚ್.ಮಠದ ರವರು. ಪರಶು ಹೋರಪೇಟಿಯವರು.ಆಯ್.ಎಚ್.ಇದ್ಲಿ.ಮೈನು ಬಾಗವಾನ . ಶಿವಣ್ಣ ಮುಗಳಿ.ಸೇರಿದಂತೆ ಉಪಸ್ಥಿತರಿದ್ದರು.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!