ಶಾರದಾ ಇಂಟರ್ ನ್ಯಾಷನಲ್ ಶಾಲೆ ಮಾಲಿಕನ ಮನೆ ಮೇಲೆ ಐಟಿ ದಾಳಿ
ಕೊಡತಗೇರಿ express ಸುದ್ದಿ
ಕೊಪ್ಪಳ,,೦೭ – ಜಿಲ್ಲೆಯ ಖ್ಯಾತ ಉದ್ಯಮಿ ಹಾಗೂ ಕಿಡದಾಳ ಶಾರದಾ ಇಂಟರ್ ನ್ಯಾಷನಲ್ ಶಾಲೆ ಮಾಲಿಕ ವಿ.ಆರ್.ಪಾಟೀಲ್ ಮನೆ ಮೇಲೆ ಬುಧವಾರ ಐಟಿ ದಾಳಿ ನಡೆದಿದೆ.
ಕೊಪ್ಪಳ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿರೋ ಮನೆ ಹಾಗೂ ಅವರಿಗೆ ಸಂಬಂಧಿಸಿದ ಸ್ಥಳಗಳು ಇತರಡೆ ಏಕ ಕಾಲಕ್ಕೆ ದಾಳಿ ಮಾಡಿ ತನಿಖೆ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತರು ಹಾಗೂ ಏಲೇಟ್ರಿಕಲ್ ಗುತ್ತಿಗೆ ದಾರರು ಹಾಗೂ ಶಾಲಾ ಮಾಲಿಕರಾದ ವಿ, ಆರ್ ಪಾಟೀಲಾ ಹಾಗೂ ಎಸ್ ಆರ್ ಪಾಟೀಲ್ ಅವರ ಮನೆ ಮೇಲೆ ಐಟಿ ದಾಳಿ ನಡೆದಿದೆ.
ಗೋವಾ, ಹುಬ್ಬಳ್ಳಿಯಿಂದ ಬಂದಿರೋ ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳ ತಂಡ ಮುಂಜಾನೆಯಿಂದ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಜನೆವರಿ 27 ರಂದು ಡಿಸಿಎಂ ಡಿ.ಕೆ.ಶಿವಕುಮಾರ ವಿ.ಆರ್ ಪಾಟೀಲ್ ಅವರ ಶಾಲೆಗೆ ಭೇಟಿ ನೀಡಿದ್ದರು. ಗವಿಮಠ ಜಾತ್ರೆಯಲ್ಲಿ ಭಾಗವಹಿಸಿದ್ದರು. ಅಕ್ರಮ ಆಸ್ತಿ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.
More Stories
ಕನಕ ಭವನ ನಿರ್ಮಾಣಕ್ಕೆ ನಾಗೇಶ್ ಲಕ್ಕಲಕಟ್ಟಿ ಅವರು ಒಂದು ಲಕ್ಷ ರೂಪಾಯಿಗೆ ದೇಣಿಗೆ
ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದಕ್ಕೆ ಜೋಶಿ ಖಂಡನೆ
ಎಪ್ರಿಲ್ ನಲ್ಲಿ ಜಿಲ್ಲೆಯಾದ್ಯಂತ ನರೇಗಾ ಕೆಲಸ ಪ್ರಾರಂಭ : ಭರತ್ ಎಸ್