ಗದಗ RTO ಅಧಿಕಾರಿ ಲಕ್ಷ್ಮೀಕಾಂತ ರಿಂದ ಸರಕಾರಿ ವಾಹನ ದುರುಪಯೋಗ ಕ್ರಮಕ್ಕೆ ಅಗ್ರಹ

ಗದಗ RTO ಅಧಿಕಾರಿ ಲಕ್ಷ್ಮೀಕಾಂತ ರಿಂದ ಸರಕಾರಿ ವಾಹನ ದುರುಪಯೋಗ ಕ್ರಮಕ್ಕೆ ಅಗ್ರಹ

ಕೊಡತಗೇರಿ ಎಕ್ಸ್‌ಪ್ರೆಸ್‌ ಸುದ್ದಿ

ಗದಗ ಜಿಲ್ಲೆಯ ಆರ್.ಟಿ.ಓ ಅಧಿಕಾರಿ ಲಕ್ಷ್ಮೀಕಾಂತ ನಾಲ್ವಾರ ಅವರಿಂದ ಕೆಲವು ತಿಂಗಳುಗಳ ಕಾಲ ನಿರಂತರವಾಗಿ ಸರ್ಕಾರಿ ವಾಹನ ದುರುಪಯೋಗ ಪಡಿಸಿಕೊಳ್ಳುತ್ತಿದ್ದರೂ, ಜಿಲ್ಲಾಧಿಕಾರಿಗಳು ಹಾಗೂ ಮೇಲಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.

ಗದಗ ಆರ್.ಟಿ.ಓ ಇಲಾಖೆಯ ವಾಹನ ಸಂಖ್ಯೆ ಕೆ.ಎ.01 ಜಿ 7113 ಸಂಖ್ಯೆಯ ವಾಹನ ನಿರಂತರವಾಗಿ ಕೊಪ್ಪಳ ನಗರಕ್ಕೆ ಆಗಮಿಸುತ್ತಿರುವ ಕುರಿತು ಸಾರ್ವಜನಿಕರ ಮಾಹಿತಿಯನ್ನಾಧರಿಸಿ 2024 ರ ಮೇ 29 ರ ಬೆಳಗ್ಗೆ 9 ಘಂಟೆಗೆ ಕೊಪ್ಪಳದ ಗವಿಮಠದ ಹತ್ತಿರವಿದ್ದ ಸರ್ಕಾರಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಗದಗ ಜಿಲ್ಲೆಯ ಆರ್.ಟಿ.ಓ ಅಧಿಕಾರಿ ಲಕ್ಷ್ಮೀಕಾಂತ ನಾಲ್ವಾರ “ಸಾರ್ವಜನಿಕರು  ಪ್ರಶ್ನಿಸಿದಾಗ ” ನಾನು ಎಲ್ಲಿ ಬೇಕಾದರೂ ಹೋಗಬಹುದು, ಯಾವ ಜಿಲ್ಲೆಯ ವಾಹನ ದಂಡ ಹಾಕಬಹುದು ಎಂದು ಬೇಜವಾಬ್ದಾರಿಯ ಮಾತನ್ನಾಡಿದರು. ಸರ್ಕಾರದ ನಿಯಮ ಗಾಳಿಗೆ ತೂರಿರುವ ಅಧಿಕಾರಿ ಮೇಲೆ ಜಿಲ್ಲಾಧಿಕಾರಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

ಕೊಪ್ಪಳ ಜಿಲ್ಲೆಗೆ ನಿರಂತರ ಓಡಾಟ:

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ವಾಸ ಇರಬೇಕು ಎಂಬ ಸರ್ಕಾರಿ ನಿಯಮವಿದೆ. ಅಲ್ಲದೆ, ಯಾವುದೇ ಸರ್ಕಾರಿ ವಾಹನ ವೈಯಕ್ತಿಕ ಕೆಲಸಕ್ಕೆ ಬಳಕೆಗೆ ಬಳಸಬಾರದು ಹಾಗೂ ಬೇರೆ ಜಿಲ್ಲೆಗೆ ತೆಗೆದುಕೊಂಡು ಹೋಗಬೇಕಾದರೆ ಜಿಲ್ಲಾಧಿಕಾರಿ ಮಾಹಿತಿ ನೀಡಿ, ಅವರಿಂದ ಪರವಾನಗಿ ಪಡೆದು ಹೋಗಬೇಕಾಗುತ್ತದೆ. ಆದರೆ, ಗದಗ ಜಿಲ್ಲೆಯ ಆರ್.ಟಿ.ಓ ಅಧಿಕಾರಿ ಲಕ್ಷ್ಮೀಕಾಂತ ನಾಲ್ವಾರ ಅವರು, ಈ ಹಿಂದೆ ಕೊಪ್ಪಳದಲ್ಲಿ ಕೆಲಸ ನಿರ್ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೊಪ್ಪಳ ಆರ್ಟಿಓ ಇಲಾಖೆಗೆ ಆಗಾಗ ಭೇಟಿ ನೀಡಿ ಅಲ್ಲಿ ಅಕ್ರಮ ಕಡಿತಗಳ ವಿಲೇವಾರಿ ಮಾಡುತ್ತಾರೆ ಎಂಬ ಕೂಡ ಇದೆ. ಇದಲ್ಲದೆ, ಕೊಪ್ಪಳದಲ್ಲಿ ಮನೆ ಮಾಡಿರುವ ಆರ್ಟಿಓ ಲಕ್ಷ್ಮೀಕಾಂತ ನಿತ್ಯ ಕೊಪ್ಪಳ-ಗದಗ ಸರ್ಕಾರಿ ವಾಹನದಲ್ಲಿ ಪ್ರಯಾಣ ಬೆಳೆಸಿ, ಸರ್ಕಾರಿ ನಿಯಮ ಗಾಳಿಗೆ ತೂರಿದ್ದಾರೆಂದು ಆರೋಪಿಸಲಾಗಿದೆ.

ಯಾವುದೇ ಸರ್ಕಾರಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸವಿದ್ದರೆ ಯಾವುದೇ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ನೆರವಾಗಲು ಅನುಕೂಲ ಎಂದು ಸರ್ಕಾರ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ವಾಸ ಇರಬೇಕೆಂದು ಆದೇಶ ಮಾಡಿದೆ. ಅದಕ್ಕಾಗಿ ಅಧಿಕಾರಿ/ಸಿಬ್ಬಂದಿಗೆ ಹೆಚ್.ಆ‌ರ್.ಎ ಮೊದಲಾದ ಭತ್ಯೆಗಳ ಮೂಲಕ ಹಣವನ್ನೂ ನೀಡಲಾಗುತ್ತಿದೆ ಎನ್ನಲಾಗಿದೆ.

ಆದರೆ,ಆರ್ಟಿಓ ಅಧಿಕಾರಿ ಲಕ್ಷ್ಮೀಕಾಂತ ಮಾತ್ರ ಕೇಂದ್ರ ಸ್ಥಾನದಲ್ಲಿ ವಾಸ ಇರದೆ ದಿನನಿತ್ಯ ಕೊಪ್ಪಳದಿಂದ ಪ್ರಯಾಣಿಸಿ ಬರುತ್ತಾರೆ. ಗದಗ-ಕೊಪ್ಪಳಕ್ಕೆ ಸರ್ಕಾರಿ ವಾಹನವನ್ನೆ ಬಳಸಿಕೊಂಡು ಕಛೇರಿಗೆ ತೆರಳುವ ಮೂಲಕ ಸರ್ಕಾರಿ ವಾಹನ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಆರೋಪಿಸಲಾಗಿದೆ.

ಅಕ್ರಮ ಆಸ್ತಿ ಒಡೆಯ ಆರ್ಟಿಓ ಗದಗ ಆರ್.ಟಿ.ಓ ಅಧಿಕಾರಿ ಲಕ್ಷ್ಮೀಕಾಂತ ನಾಲವಾರ?

ಮೂಲತಃ ಸಿಂಧನೂರಿನವರಾದ ಲಕ್ಷ್ಮೀಕಾಂತ ನಾಲವಾರ ಕೊಪ್ಪಳ ದಲ್ಲಿ ಕೊಪ್ಪಳ ೨೦೧೭ ರಿಂದ ಬ್ರೇಕ್ ಇನ್ಸ್ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇವರ ಅವಧಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಎಸೆಯಲಾಗಿದೆ. ಇದಲ್ಲದೆ, ಸಧ್ಯಕ್ಕೆ ಕೊಪ್ಪಳ ಜಿಲ್ಲೆಯ ಹಲವು ಅಕ್ರಮ ಆಸ್ತಿ ಇದ್ದು, ರಿಯಲ್ ಎಸ್ಟೇಟ್ ಕ್ಷೇತ್ರದಲ್ಲೂ ಲಕ್ಷೀಕಾಂತ ಅವರ ಛಾಪು ಇದೆ. ರೆಸಾರ್ಟ್ ಕಟ್ಟಿಸುತ್ತಿದ್ದಾರೆ, ಫೈನಾನ್ಸ್ ಕೂಡ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಹನುಮಂತ ಎಲ್, ಅವರು  ಪತ್ರಿಕೆಗೆ ಮಾಹಿತಿ ನೀಡಿದರು.

ಒಟ್ಟಾರೆ,

ಜಿಲ್ಲಾಧಿಕಾರಿಗಳಾಗಲಿ ಅಥವಾ ಸಂಬಂಧಪಟ್ಟವರು ಇತ್ತಕಡೆ ಗಮನಹರಿಸಿ ಅಧಿಕಾರ ಮತ್ತು ವಾಹನ ದುರುಪಯೋಗಪಡಿಸಿಕೊಳ್ಳುತ್ತಿರುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕಿದೆ. ಆ ಮೂಲಕ ಪಾರದರ್ಶಕ ಆಡಳಿತಕ್ಕಾಗಿ ಮತ್ತು ಜನತೆಯ ಅನುಕೂಲಕ್ಕಾಗಿ ಸರ್ಕಾರದ ಗೌರವ ಉಳಿಸುವ ಕೆಲಸ ಆಗಬೇಕಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

*”” ಭಾಕ್ಸ*”

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸ ಇರದ ಕಾರಣ ಅಧಿಕಾರಿಗಳು ಸಮಯಕ್ಕೆ ಸರಿಯಾಗಿಯಾಗಿ ಕಛೇರಿಗಳಿಗೆ ಬರುವುದಿಲ್ಲ. ಸಾರ್ವಜನಿಕರು ದಿನನಿತ್ಯ ಕಛೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಮುಂದುವರೆದಿದೆ. ಜೊತೆಗೆ ಜನಪ್ರತಿನಿಧಿಗಳ ಮನೆಗಳಿಗೆ ಹೋಗಿ ಅವರ ಕೆಲಸಗಳನ್ನು ಮಾಡಿಕೊಡುವುದರಿಂದ ಜನಕ್ಕೆ ಅಧಿಕಾರಿಗಳು ಕಛೇರಿಗಳಲ್ಲಿ ಸಿಗುತ್ತಿಲ್ಲ. ಪ್ರತಿದಿನ 11 ಘಂಟೆಯ ನಂತರ ಅಧಿಕಾರಿಗಳು ಕಛೇರಿಗೆ ಬರುವುದರಿಂದ ಜನತೆಗೆ ತೊಂದರೆಯಾಗಿದೆ. ಮದ್ಯಾನ್ಹ ಊಟಕ್ಕೆ ಹೊರಗೆ ಹೋದರೆ ಘಂಟೆಗಟ್ಟಲೆ ಬರುವುದಿಲ್ಲ. ಇಂಥಹ ಜನ ವಿರೋಧಿ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿ ಬೇರೆ ಡೆಗೆ ವರ್ಗಾವಣೆ ಮಾಡಬೇಕು”
-ಶಿವಾನಂದ ಕಲ್ಗುಡಿ, ಗದಗ ಜಿಲ್ಲಾಧ್ಯಕ್ಷರು, ರೈತ ಯುವ ವೇದಿಕೆ.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!