ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
ಕೊಡತಗೇರಿ ಎಕ್ಸ್ಪ್ರೆಸ್ ಸುದ್ದಿ
ಕೊಪ್ಪಳ ಜುಲೈ 18 ಗಂಗಾವತಿಯ ಆರ್ಎನ್ಎಸ್ ಕಂಪನಿಯಲ್ಲಿ ಸೆಕ್ಯೂರಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತೆಲಂಗಾಣ ರಾಜ್ಯದ ವನಪರ್ತಿ ಜಿಲ್ಲೆಯ ಪಾನಗಲ್ ಮಂಡಲ ತಾಲ್ಲೂಕಿನ ಕೇತಪಲ್ಲಿ ಗ್ರಾಮದ ನಿವಾಸಿ ಗಾಲಿಗಲ್ಲ ಬೊಜ್ಜಣ್ಣ ಎಂಬ 60 ವರ್ಷದ ವ್ಯಕ್ತಿಯು 2024ರ ಮೇ 12 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ:81/2024 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ:
ವ್ಯಕ್ತಿಯು 5.5 ಅಡಿ ಎತ್ತರವಿದ್ದು, ದುಂಡು ಮುಖ, ಸಾದಾ ಕಪ್ಪು ಮೈಬಣ್ಣ, ಸದೃಢ ಮೈಕಟ್ಟು ಹೊಂದಿದ್ದಾರೆ. ಕಾಣೆಯಾದಾಗ ಬಿಳಿ ಅಂಗಿ, ಬಿಳಿ ಲುಂಗಿ ಮತ್ತು ಟವೇಲ್ ಧರಿಸಿದ್ದರು. ತೆಲುಗು ಭಾಷೆ ಮಾತನಾಡುತ್ತಾರೆ.
ಮೇಲ್ಕಂಡ ಚಹರೆಯ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಗಂಗಾವತಿ ನಗರ ಪೋಲಿಸ್ ಠಾಣೆ ಪಿಐ ದೂ.ಸಂ: 08533-230633, 9480803752 ಗಂಗಾವತಿ ಡಿವೈಎಸ್ಪಿ: 08533-230853, 9480803721 ಎಸ್ಪಿ ಕಚೇರಿ: 08539-230111 ಗೆ ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.
More Stories
ರಸ್ತೆ ಅಗಲೀಕರಣ ಕಾಮಗಾರಿಗೆ ಶಾಸಕ ಜಿ.ಎಸ್ ಪಾಟೀಲ ಭೂಮಿಪೂಜೆ ನೆರವೇರಿಸಿದರು
ಅಕ್ರಮ ಅಕ್ಕಿ ಸಂಗ್ರಹ: 3.6 ಕ್ವಿಂಟಲ್ ಪಡಿತರ ಅಕ್ಕಿ ವಶಕ್ಕೆ: ಆರೋಪಿ ಅರೆಸ್ಟ್!
ಭಾರತದ ಸ್ವತಂತ್ರ ಸಂಗ್ರಾಮಕ್ಕೆ ಅನೇಕರ ತ್ಯಾಗವಿದೆ – ಡಾ.ಹನಸಿ