ಜಾತಿನಿಂದನೆ ಪ್ರಕರಣ: 98 ದೋಷಿಗಳಿಗೆ ಜೀವಾವಧಿ ಶಿಕ್ಷೆ ಮಹತ್ವದ ತೀರ್ಪು

ಜಾತಿನಿಂದನೆ ಪ್ರಕರಣ: 98 ದೋಷಿಗಳಿಗೆ ಜೀವಾವಧಿ ಶಿಕ್ಷೆ ಮಹತ್ವದ ತೀರ್ಪು

ಕೊಡತಗೇರಿ ಎಕ್ಸಪ್ರೆಸ್ ಸುದಗದಿ

10 ವರ್ಷಗಳ ನಂತರ ಕೊಪ್ಪಳ ಜಿಲ್ಲಾ ನ್ಯಾಯಾಲಯದ ಮಹತ್ವದ ತೀರ್ಪು | ದೇಶದ ಇತಿಹಾಸದಲ್ಲೇ ಮೊದಲ ಪ್ರಕರಣ

ಕೊಪ್ಪಳ: ಜಾತಿ ನಿಂದನೆ ಮತ್ತು ದೌರ್ಜನ್ಯ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 5 ಸಾವಿರ ರು. ದಂಡ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಪ್ರಕರಣ ಉಳಿದ 3 ಅಪರಾಧಿಗಳಿಗೆ 5 ವರ್ಷ ಜೈಲು, ತಲಾ 2 ಸಾವಿರ ದಂಡ ಹಾಕಿ ಆದೇಶಿಸಿರುವ ಜಿಲ್ಲಾ ನ್ಯಾಯಾಧೀಶ ಸಿ. ಚಂದ್ರಶೇಖರ ಐತಿಹಾಸಿಕ ಆದೇಶದಲ್ಲಿ ಅಮೇರಿಕಾದ ಹೋರಾಟ

ಗಾರ್ತಿ ಮರೀಯನ್ ಆಂಡರ್ಸನ್ ಹೇಳಿಕೆ ಉಲ್ಲೇಖಿಸಿದ್ದಾರೆ. ಪ್ರಕರಣದಲ್ಲಿ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಒಟ್ಟು 117 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಈ ಪೈಕಿ ಹಲವರು ಮೃತಪಟ್ಟಿದ್ದಾರೆ. ಇನ್ನು ಕೆಲವರ ಹೆಸರು ಪುನರಾವರ್ತನೆಯಾಗಿದೆ.: ಉಳಿದ 101 ಆರೋಪಿಗಳು ತಪ್ಪಿತಸರು ಎಂದು ನ್ಯಾಯಾಲಯ ತೀರ್ಮಾನಿಸಿತ್ತು. ಈ ಪೈಕಿ ಮೂವರು ಅಪರಾಧಿಗಳು ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದ್ದಾರೆ. ಈ ಹಿನ್ನೆಲೆ ಅವರಿಗೆ ಜಾತಿನಿಂದನೆ ಕಾಯಿದೆ ಅನ್ವಯವಾಗದಿದ್ದರಿಂದ ಶಿಕ್ಷೆಯ ಪ್ರಮಾಣ ಕಡಿಮೆಯಾಗಿದೆ ಎನ್ನಲಾಗಿದೆ.

ಗಂಗಾವತಿ ತಾಲೂಕು ಮರಕುಂಬಿಯಲ್ಲಿ 2014ರ ಆ.28 ರಂದು ಘಟನೆ ನಡೆದಿತ್ತು. 10 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಅ.21 ರಂದು ಆರೋಪ ಪಟ್ಟಿಯಲ್ಲಿನ

ಮರಿಯನ್ ಆಂಡರ್ಸನ್ ಹೇಳಿಕೆ ಉಲ್ಲೇಖ

ಐತಿಹಾಸಿಕ ಆದೇಶ ನೀಡಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಚಂದ್ರಶೇಖರ, ಎಷ್ಟೇ ದೊಡ್ಡ ದೇಶವಾಗಿದ್ದರೂ, ಅದು ತನ್ನ ದುರ್ಬಲ ದೇಶವಾಸಿಗಳಿಗಿಂತ ಬಲಶಾಲಿಯಾಗಿರದು. ಯಾವುದೇ ವ್ಯಕ್ತಿಯನ್ನು ಕೆಳಗೆ ಇರಿಸಬೇಕೆಂದರೆ, ನಿದ್ದು ಕೆಲ ಭಾಗ ಸಹ ಕೆಳಗೆ ಇರಬೇಕಾಗುತ್ತದೆ. ಆದ್ದರಿಂದ, ನಿಮ್ಮ ನಿರೀಕ್ಷೆಯಂತೆ ಮೇಲಕ್ಕೆ ಏರುವುದು ನಿಮಗೆ ಸಾಧ್ಯವಾಗದು’ ಎಂಬ ಮರಿಯನ್ ಆಂಡರ್ಸನ್ ಅವರ ಹೇಳಿಕೆ ಉಲ್ಲೇಖಿಸಿದ್ದಾರೆ. ಈಕೆ 20ನೇ ಶತಮಾನದಲ್ಲಿ ಯುಎಸ್ ನಲ್ಲಿ ಜನಾಂಗೀಯ ತಾರತಮ್ಯದ ವಿರುದ್ದದ ಹೋರಾಟಗಾರ್ತಿ, ಆಫ್ರಿಕಾ ಮೂಲಕ ಆಮೇರಿಕನ್ ಕಲಾವಿದರ ಹೋರಾಟದಲ್ಲಿ ಆಂಡರ್ಸನ್ ಮುಂದಾಳು ಆಗಿದ್ದರು.

ಎಲ್ಲ ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಮಾನಿಸಿ, ಶಿಕ್ಷೆ ಪ್ರಮಾಣದ ಆದೇಶ ಕಾಯ್ದಿರಿಸಿದ್ದರು. ಗುರುವಾರ ಸಂಜೆ ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಮರಕುಂಬಿಯಲ್ಲಿ ಕಳೆದ 2014ರ ಆ.29 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ

ಅಪರಾಧಿಗಳ ಸಂಬಂಧಿಕರ ಆಕ್ರೋಶ

ನ್ಯಾಯಾಧೀಶರು ಆದೇಶ ಪ್ರಕಟಿಸುತ್ತಿದ್ದಂತೆಯೇ ನ್ಯಾಯಾಲ ಯದ ಆವರಣದಲ್ಲಿ ಸೇರಿದ್ದ ಅಪರಾಧಿಗಳ ಸಂಬಂಧಿಕರು ಮತ್ತು ಕುಟುಂಬದವರ ರೋದನ ಮುಗಿಲು ಮುಟ್ಟಿತ್ತು. ಕೆಲವು ಮಹಿಳೆಯರು ಆದೇಶದ ಬಗ್ಗೆ ಆಕ್ಷೇಪಿಸಿದರು. ಇನ್ನೂ ಹಲವರು ಘಟನೆ ನಡೆದ ದಿನ ಗ್ರಾಮದಲ್ಲಿ ಇರದ ವ್ಯಕ್ತಿಗಳಿಗೂ ಜೀವಾವಧಿ ಶಿಕ್ಷೆ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷೆ ಪ್ರಕಟಿಸಿದ ನಂತರ ಕೊಪ್ಪಳ ಕೋರ್ಟ್ ಆವರಣದಲ್ಲಿ ಅಪರಾಧಿಗಳ ಕುಟುಂಬಸ್ಥರ ಆಕ್ರಂದನ.

ಕಳೆದ ಅ.21 ರಂದು 101 ಜನರೂ ಅಪರಾಧಿಗಳು ಎಂದು ತೀರ್ಮಾನಿಸಿದ್ದ ನ್ಯಾಯಾಲಯ ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ಈ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಉಳಿದ ಮೂವರಿಗೆ 5 ವರ್ಷ ಜೈಲುಶಿಕ್ಷೆ ಮತ್ತು ನೀಡಲಾಗಿದೆ. ಜಾತಿನಿಂದನೆ ಕಾಯಿದೆ ಅನ್ವಯವಾಗದ ಕಾರಣ ಈ ಮೂವರಿಗೆ ಶಿಕ್ಷೆಯ ಪ್ರಮಾಣ ಕಡಿಮೆ ಆಗಿದೆ.

ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ಆದೇಶ ನೀಡಿದೆ. ಕ್ಷೌರದ ಅಂಗಡಿ ಮತ್ತು ಹೋಟೆಲ್‌ಗೆ ಪ್ರವೇಶ ಸಂಬಂಧ ಗ್ರಾಮದ ದಲಿತರು ಮತ್ತು ಸವರ್ಣೀಯರ ನಡುವೆ ಗಲಾಟೆ ನಡೆದಿತ್ತು. ನಂತರ ಗಂಗಾವತಿಯ ಚಿತ್ರಮಂದಿರದಲ್ಲಿ ಆರಂಭವಾದ ಗಲಾಟೆ ಮರಕುಂಬಿಯಲ್ಲಿ ದಲಿತರ ಕೇರಿಗೆ ನುಗ್ಗಿ ಗುಡಿಸಲಿಗೆ ಬೆಂಕಿ ಇಡುವ ಹಂತ ತಲುಪಿತ್ತು. ಗಲಾಟೆ ಹಿನ್ನೆಲೆ ಪೊಲೀಸರು ಗ್ರಾಮದಲ್ಲಿ ಬೀಡುಬಿಟ್ಟಿದ್ದರೂ ಆರೋಪಿಗಳು ದಲಿತರ ಕೇರಿಗೆ ನುಗ್ಗಿ ಗುಡಿಸಲುಗಳಿಗೆ ಬೆಂಕಿ ಇಟ್ಟಿದ್ದರು ಎಂದು ದೂರಲಾಗಿತ್ತು.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!