ಕುರಿಗಾಹಿ ಬರೆದ ನಾಟಕಗಳು ರಾಜ್ಯಾದ್ಯಂತ ಪ್ರದರ್ಶಿಸುತ್ತಿವೆ : ಕೊಡತಗೇರಿ

ಕುರಿಗಾಹಿ ಬರೆದ ನಾಟಕಗಳು ರಾಜ್ಯಾದ್ಯಂತ ಪ್ರದರ್ಶಿಸುತ್ತಿವೆ : ಕೊಡತಗೇರಿ

ಕೊಡತಗೇರಿ ಎಕ್ಸಪ್ರೆಸ್ ಸುದ್ದಿ

ಗಜೇಂದ್ರಗಡ : ಗಂಡುಗಲಿ ವೀರ ಪರಶುರಾಮ ಎಂಬ ನಾಟಕವನ್ನು ಅಷ್ಟೋಂದು ವಿದ್ಯಾವಂತನಲ್ಲದ ಕವಿಗಳಾದ ಡಿ.ಆರ್. ಪೂಜಾರ ಅವರು ಬರೆದಿದ್ದಾರೆ . ಅವರ ಬರೆದ ನಾಟಕಗಳು ಇಂದು ಪ್ರತಿದಿನ ಒಂದಿಲ್ಲೊಂದು ಊರಲ್ಲಿ ಪ್ರದರ್ಶನ ಕೊಳ್ಳುತ್ತಿವೆ ಎಂದು ವಕೀಲರಾದ ಕೆ.ಎಸ್.ಕೊಡತಗೇರಿ ಯವರು ಹೇಳಿದರು.
ಅವರು ರಾಜೂರ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಬರಲಿಂಗೇಶ್ವರ ನಾಟ್ಯ ಸಂಘ ರಾಜೂರ ಅವರು ಹಮ್ಮಿಕೊಂಡಿದ್ದ ಗಂಡುಗಲಿ ವೀರಪರಶುರಾಮ ನಾಟಕದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಂಗಭೂಮಿ ಕಲೆ ಒಂದು ಅದ್ಭುತವಾದಂತಹ ಮನರಂಜನೆಯನ್ನು ನೀಡುವಂತಹ ಕಲೆಯಾಗಿದ್ದು ಈ ಕಲಿಯು ಗ್ರಾಮೀಣ ಸೊಗಡನ್ನು ಎತ್ತಿ ತೋರಿಸ್ತದೆ ಇಂತಹ ಕಲೆಗಳು ನಮ್ಮ ಗ್ರಾಮದಲ್ಲಿ ಇಂದಿಗೂ ಕೂಡ ಉಳಿದಿರುತ್ತವೆ ಎಂದರೆ ನಿಮ್ಮಂತಹ ಕಲಾ ರಸಿಕರ ಆಶೀರ್ವಾದವೇ ಕಾರಣ ಎಂದು ಹೇಳಿದರು.
ನಾಟಕವನ್ನು ಮಾಡಿದ ಪೋಲಿಸ್ ಅಧಿಕಾರಿ ರಂಗನಾಥ್ ಡೊಳ್ಳಿನ ಮಾತನಾಡಿ ಕಲೆಯು ಎಲ್ಲರನ್ನೂ ಆಕರ್ಷಿಸುತ್ತದೆ. ಆದರೆ ಕೆಲವರನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತದೆ ಅಂತಹ ಕಲಾವಿದರು ರಾಜೂರಿನಲ್ಲಿ ಅನೇಕರು ಇರುವುದರಿಂದ ಪ್ರತಿ ವರ್ಷ ಮೂರ್ನಾಲ್ಕು ನಾಟಕಗಳು ಕಲಾವಿದರಿಂದ ಆಡುತ್ತಾರೆ. ಅಂತಹ ಕಲಾವಿದರನ್ನು ಭಂಡಾರದ ಒಡೆಯ ಬೀರಲಿಂಗೇಶ್ವರ ಸದಾ ಆಶೀರ್ವದಿಸಿರುತ್ತಾನೆ ಅಂತಹ ಕಲೆಯು ಗ್ರಾಮದಲ್ಲಿ ಹೆಚ್ಚು ಹೆಚ್ಚು ಪ್ರದರ್ಶಿಸಲಿ ಸದಾ ಕಲಾ ದೇವತೆ ಎಲ್ಲ ಕಲಾವಿದರು ಆಶೀರ್ವದಿಸಲಿ ಎಂದು ಹೇಳಿದರು.

ನಂತರ ಮಾತನಾಡಿದ ಹೋರಾಟಗಾರ ಶರಣು ಪೂಜಾರಿ ಮಾತನಾಡಿ ನಾಟಕಗಳು ನಮ್ಮ ಬದುಕಿಗೆ ಹತ್ತಿರವಾಗಿರುತ್ತದೆ ಅಂತಹ ಹತ್ತಿರವಾದ ಒಳ್ಳೆಯ ಪಾತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾ ಕೆಟ್ಟ ಪಾತ್ರಗಳ ಸಂದೇಶಗಳನ್ನು ಇಲ್ಲೇ ಮರೆಯೋಣ ರಂಗಭೂಮಿಯ ಕಲೆಯನ್ನು ಎಲ್ಲರೂ ಪ್ರೋತ್ಸಾಹಿಸೋಣ ಎಂದರು.ಕಾರ್ಯಕ್ರಮದ ಸಾನಿಧ್ಯವನ್ನು ಸಂಗಯ್ಯಜ್ಜ ಹಿರೇಮಠ ಅವರು ಕಳಕಯ್ಯಜ್ಜನವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಡಿಪಿ ಸದಸ್ಯ ಸುರೇಶಗೌಡ್ರು, ಶರಣಪ್ಪ ಹಾದಿಮನಿ, ಸಂತೋಷ ಹಳ್ಳದ, ಮಲ್ಲಪ್ಪ‌ಹಾಸಿಮನಿ , ಅಜ್ಜನ ಅವರು, ಸಂಕ್ರಿಯವರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!