ನಮ್ಮದು ಬಿಟ್ಟಿ ಭಾಗ್ಯವಲ್ಲಾ ಗಟ್ಟಿ ಭಾಗ್ಯ ಶಾಸಕ ಜಿ.ಎಸ್.ಪಾಟೀಲ

 

ನಮ್ಮದು ಬಿಟ್ಟಿ ಭಾಗ್ಯವಲ್ಲಾ ಗಟ್ಟಿ ಭಾಗ್ಯ ಶಾಸಕ ಜಿ.ಎಸ್.ಪಾಟೀಲ

ಕೊಡತಗೇರಿ ಎಕ್ಸ್‌ಪ್ರೆಸ್‌ ಸುದ್ದಿ
ಗಜೇಂದ್ರಗಡ : ನಾನು ಸದಾ ಜನರ ಕೆಲಸ‌ಮಾಡುವವನು ನಾನು ರಾಜಕೀಯ ಜೀವನದಲ್ಲಿ ಸೋಲಲಿ ಗೆಲ್ಲಲಿ ಯಾವತ್ತೂ ನಮ್ಮ ಕುಟಂಬ ನಾನು ಜನರಿಂದ ದೂರ ಉಳಿದಿಲ್ಲಾ ಜನರ ಮದ್ಯ ಕೆಲಸ ಮಾಡುವುದೇ ನನಗೆ ಹರ್ಷ, ನಾವು ಚುನಾವಣೆ ಸಮಯದಲ್ಲಿ ಹಲವಾರು ಜನಪರವಾದ ಯೋಜನೆಗಳನ್ನ ಘೋಷಣೆ ಮಾಡಿದೇವು ಕೇಲವರು ಅವುಗಳನ್ನ ಟಿಕೇ ಮಾಡಿದು ಇವೆಲ್ಲಾ ಬಿಟ್ಟಿ ಭಾಗ್ಯವೆಂದು ಬಿಜೆಪಿ ಟಿಕೆ ಮಾಡಿತು ನಾವು ಅಧಿಕಾರಕ್ಕೆ ಬಂದ ಮೊದಲನೇ ಸಚಿವ ಸಂಪುಟದಲ್ಲಿಯೇ ಆ ಎಲ್ಲಾ ಭರವಸೆಗಳಿಗೆ ಅನುಮೋದನೆ ನೀಡಿದ್ದೇವೆ ಆದ್ದರಿಂದ ನಮ್ಮದು ಬಿಟ್ಟಿ ಭಾಗ್ಯವಲ್ಲಾ ಗಟ್ಟಿ ಭಾಗ್ಯ ಎಂದು ಶಾಸಕ‌ಜಿ.ಎಸ್.ಪಾಟೀಲ‌ ಹೇಳಿದರು ಅವರು ಇತ್ತಿಚಿಗೆ ಗೋಗೇರಿ ಗ್ರಾಮದಲ್ಲಿ ನೆಡದ ಅಭಿನಂದನಾ ಸಮಾರಂಭದಲ್ಲಿ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು ಗೋಗೇರಿ ಗ್ರಾಮ ನಾನು ಸೋಲಲಿ ಗೆಲ್ಲಲಿ ನನ್ನ ಜೊತೆ ಯಾವಾಗಲೂ ಇದ್ದಾರೆ ಅವರ ಋಣ ನಾನೆಂದು ತಿರಿಸಲಾಗುವದಿಲ್ಲಾ ಯಾವುದೇ ಚುನಾವಣೆ ಬಂದರು ಅವರು ಹೆಚ್ಚಿನ ಮತಗಳನ್ನ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ನೀಡುತ್ತಾರೆ ಈ ಭಾರಿ ಕೂಡ ಅತ್ಯಂತ ಹೆಚ್ಚು ಮತಗಳನ್ನು ತಮ್ಮ ಗ್ರಾಮದಿಂದ ನೀಡಿದ್ದಾರೆ ಅವರಿಗೆ ನಾನು ಕೃತ್ಞತನಾಗಿದ್ದೇನೆ ಎಂದ ಅವರು ಈ ಗೋಗೇರಿ ,ಮಾಟರಂಗಿ,ನಾಗರಸಕೊಪ್ಪ, ನಾಗರಸಕೊಪ್ಪ ತಾಂಡ ದ ಜನರು ಯಾವಗಲೂ ನನ್ನೊಂದಿಗೆ ಇದ್ದಿರಿ ನಿಮ್ಮೆಲ್ಲಾ ಗ್ರಾಮಗಳ ಅಭಿವೃದ್ದಿಗೆ ನಾನು ಬದ್ಧ ಎಂದರು. ಕಾರ್ಯಕ್ರಮದಲ್ಲಿ ನೆರೆಗಲ್ ಬ್ಲಾಕ್ ಅಧ್ಯಕ್ಷರಾದ ಶರಣಪ್ಪ ಬೆಟಗೇರಿ, ರೋಣ ಬ್ಲಾಕ ಅಧ್ಯಕ್ಷರಾದ ವೀರಣ್ಣ ಶೇಟ್ಟರ, ಎಚ್.ಎಸ್.ಸೊಂಪುರ, ಶಿವರಾಜ ಘೋರ್ಪಡೆ, ಹೇಮಾಪತಿ ಭೋಸಲೆ, ಹನುಮಂತಪ್ಪ ಹೊರಪೇಟೆ, ಕೆ.ಎಸ್.ಕೊಡತಗೇರಿ, ಮಲ್ಲಿಕಾರ್ಜುನ ಗಾರಗಿ, ಕಟ್ಟೆಪ್ಪ ಮಾದರ, ಇಮಾಮಸಾಬ ಬಾಗವಾನ, ಹುಸೇನಸಾಬ ಬಡಿಗೇರ, ಮತ್ತಪ್ಪ ಗುಂಡೆ, ಐ.ಎಚ್.ಬಾಗವಾನ, ಕೆ.ಕೆ.ಬಾಗವಾನ, ಡಾ: ಬಿ.ಎಸ್.ಪಾಟೀಲ, ಸಂಗಪ್ಪ ಅಡವಿ, ಮುರ್ತುಜಾ ಡಾಲಾಯತ, ಹನುಮಂತಪ್ಪ ಮಾದರ, ಷಣ್ಣಮುಖಪ್ಪ ಕರಡಿ, ತಿರುಪತಿ ರಾಠೋಡ, ಸಂಭಾಜಿ ಗಾರಗಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!