ಹಿಂದುಳಿದ ವರ್ಗಗಳ ಜನರನ್ನು ಒಂದು ಮಾಡುವುದೇ ವಾಯ್ಸ್ ಆಫ್ ಓಬಿಸಿ ಗುರಿ; ಶಾಸಕ ಜಿ.ಎಸ್.ಪಾಟೀಲ

ಹಿಂದುಳಿದ ವರ್ಗಗಳ ಜನರನ್ನು ಒಂದು ಮಾಡುವುದೇ ವಾಯ್ಸ್ ಆಫ್ ಓಬಿಸಿ ಗುರಿ; ಶಾಸಕ ಜಿ.ಎಸ್.ಪಾಟೀಲ

ಕೊಡತಗೇರಿ ಎಕ್ಸಪ್ರೆಸ್ ಡಿಜಿಟೆಲ್ ಹೌಸ

ರೋಣ,ಅಕ್ಟೋಬರ್ ೦೫-ಪ್ರಜಾಪ್ರಭುತ್ವ ರಕ್ಷಿಸಲು, ನ್ಯಾಯಸಮ್ಮತ ಪ್ರತಿನಿಧಿತ್ವವನ್ನು ಖಚಿತಪಡಿಸಲು ಮತ್ತು ಸಾಮಾಜಿಕ ನ್ಯಾಯವನ್ನು ಸಾಧಿಸಲು ಓಬಿಸಿ ಸಮುದಾಯಗಳನ್ನು ಒಂದು ಮಾಡುವುದೇ ಈ ವಾಯ್ಸ್ ಆಪ್ ಓಬಿಸಿ- ೧೦೦ ಮುಖ್ಯ ಗುರಿಯಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ್  ಹೇಳಿದರು.

ನಗರದ ಅಕ್ಕಮಾಹದೇವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಜಿಲ್ಲಾ ಸಮಿತಿಯಿಂದ ಆಯೋಜಿಸಲಾಗಿದ್ದ ವಾಯ್ಸ್ ಆಪ್ ಓಬಿಸಿ-೧೦೦ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಮುಖವಾಗಿ ಸಾಮಾಜಿಕ, ದಮನಕ್ಕೊಳಗಾದ ಆರ್ಥಿಕ,ರಾಜಕೀಯವಾಗಿ ಸಮುದಾಯಗಳಾದ ಹಿಂದುಳಿದ, ಅಲ್ಪ ಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ಶಕ್ತಿಯಾಗಲು ಈ ವಾಯ್ಸ್ ಮೂಲಕ ಪಕ್ಷದ ಎಲ್ಲರೂ ಕೆಲಸ ಮಾಡಬೇಕೆಂದು ಅವರು ಹೇಳಿದರು. ಕಳೆದ ಜುಲೈ ೨೫ ರಂದು ದೆಹಲಿಯಲ್ಲಿ ಪಕ್ಷದ ವರಿಷ್ಠ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆಯೇ ಅನೇಕರು ಈ ಹೊಸ ಕಲ್ಪನೆಗೆ ಚಾಲನೆ ನೀಡಿದ್ದು, ಮೊದಲ ಹಂತದಲ್ಲಿ ಸಮಾವೇಶಗಳನ್ನು ಮಾಡುವ ಮೂಲಕ ಸಂಘಟಿಸಬೇಕು ಮತ್ತು ಮುಂದಿನ ದಿನಗಳಲ್ಲಿ ತಾಲೂಕು ಮತ್ತು ಹಳ್ಳಿಗಳಿಗೂ ಈ ಧ್ವನಿ ವಿಸ್ತರಣೆಯಾಬೇಕೆಂಬ ನಾಯಕರ ಕನಸು ನನಸು ಮಾಡೋಣ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಂಗ್ರೆಸ್ ಪಕ್ಷದ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿಂದುಳಿದ ವರ್ಗದ ನಾಯಕ ವ್ಹಿ.ಆರ್.ಗುಡಿಸಾಗರ ವಹಿಸಿದ್ದರು. ಕಾರ್ಯಕ್ರಮದಲ್ಲಿ  ಓಬಿಸಿ ಅಧ್ಯಕ್ಷರಾದ ಶ್ರೀಕಾಂತ ಅವದೂತ ವಕೀಲರು,ಶ್ರೀ ಶರಣು ಭಾವಿ, ಗುಡದಯ್ಯ ಯಳವತ್ತಿ,ಶ್ರೀಧರ ಬಿದರಳ್ಳಿ. ನೆರೆಗಲ್ ಬ್ಲಾಕ ಅಧ್ಯಕ್ಷರಾದ ಶರಣಪ್ಪ ಬೇಟಗೇರಿ, ರೋಣ ಬ್ಲಾಕ್ ಅಧ್ಯಕ್ಷರಾದ ವೀರಣ್ಣ ಶೇಟ್ಟರ, ಗಜೇಂದ್ರಗಡ ಬ್ಲಾಕ್ ಅಧ್ಯಕ್ಷರಾದ  ಶಿವರಾಜ ಘೋರ್ಪಡೆ,ಆಯ್.ಎಸ್.ಪಾಟೀಲರು, ಎಚ್.ಎಸ್.ಸೊಂಪುರ. ಶಿವಾನಂದ ಪಾಚಂಗಿ,ಶ್ರೀ ಎಫ್.ಎಚ್. ಅಗಸಿಮನಿ.ವಿ.ಬಿ.ಸೋಮನಕಟ್ಟಿ,ಇಸೂಪ ಇಟಗಿ, ಮಂಜುಳಾ ಹುಲ್ಲಣ್ಣನವರ,ಶ್ರೀ ಅಕ್ಷಯ ಪಾಟೀಲ ಸವಿತಾ ಬಿದರಳ್ಳಿ,ಹನಮಂತಪ್ಪ ತಳ್ಳಿಕೆರಿ,ಪರಶುರಾಮ ಅಳಗವಾಡಿ, ಉಮೇಶ ಹೂಗಾರ,ಕೆ.ಎಸ್.ಕೊಡತಗೇರಿ, ಅಂದಪ್ಪ ಬಿಚ್ಚೂರ,ಬಸವರಾಜ ಜಗ್ಗಲ್ ,ಮಂಜುಳಾ ರೇವಡಿ,ಸೇರಿದಂತೆ ಉಪಸ್ಥಿತರಿದ್ದರು.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!