ಸಾಯಬೇಕು ಎಂದವಳು ಸಾಧಿಸಿದಳು
ಕೊಡತಗೇರಿ ಎಕ್ಸ್ಪ್ರೆಸ್ :
17 ನೇ ವಯಸ್ಸಿನಲ್ಲಿ, ಅವಳು ಕಾಲೇಜಿನಿಂದ ತಿರಸ್ಕರಿಸಲ್ಪಟ್ಟಳು.
25 ನೇ ವಯಸ್ಸಿನಲ್ಲಿ ಅವಳ ತಾಯಿ ಅನಾರೋಗ್ಯದಿಂದ ನಿಧನರಾದರು.
26 ನೇ ವಯಸ್ಸಿನಲ್ಲಿ, ಅವಳು ಇಂಗ್ಲಿಷ್ ಕಲಿಸಲು ಪೋರ್ಚುಗಲ್ಗೆ ತೆರಳಿದರು.
27 ನೇ ವಯಸ್ಸಿನಲ್ಲಿ, ಅವಳು ಮದುವೆಯಾದಳು.
ಪತಿಯಿಂದ ನಿಂದನೆಗೊಳಗಾಗಿ ಹಿಂಸಿಸಲ್ಪಟ್ಟಲು. ಇದೇ ಸಮಯದಲ್ಲಿ ಹೆಣ್ಣು ಮಗವೊಂದಕ್ಕೆ ಜನ್ಮನೀಡಿದಳು.
28 ನೇ ವಯಸ್ಸಿನಲ್ಲಿ ಅವಳು ಗಂಡನಿಂದ ವಿಚ್ಛೇದನ ಪಡೆದಳು ಮತ್ತು ತೀವ್ರ ಖಿನ್ನತೆಗೆ ಒಳಗಾದಳು.
29 ನೇ ವಯಸ್ಸಿನಲ್ಲಿ ಒಂಟಿ ತಾಯಿಯಾಗಿ ತನ್ನ ಮಗಳೊಂದಿಗೆ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸಿದಳು.
30 ನೇ ವಯಸ್ಸಿನಲ್ಲಿ, ಆತ್ಮಹತ್ಯೆಗೆ ನಿರ್ಧರಿಸಿದ್ದಳು…
ಈ ನಡುವೆ ಅವಳು ತಾನು ಅತ್ಯುತ್ತಮವಾಗಿ ಮಾಡಬಹುದಾದ, ತನ್ನ Passion, ಹವ್ಯಾಸಗಳನ್ನು ಪೋಷಿಸುವ ಕೆಲಸವೊಂದನ್ನು ಮಾಡುವತ್ತ ಚಿತ್ತ ಹರಿಸಿದಳು…
ಆ ಕೆಲಸ ಬರವಣಿಗೆಯಾಗಿತ್ತು.
31 ನೇ ವಯಸ್ಸಿನಲ್ಲಿ, ಅವರು ಅಂತಿಮವಾಗಿ ತಮ್ಮ ಮೊದಲ ಪುಸ್ತಕವನ್ನು ಪ್ರಕಟಿಸಿದರು.
35 ನೇ ವಯಸ್ಸಿನಲ್ಲಿ, ಅವಳು 4 ಪುಸ್ತಕಗಳನ್ನು ಬಿಡುಗಡೆ ಮಾಡಿದಳು. ಮತ್ತು “ವರ್ಷದ ಲೇಖಕಿ” ಎಂದು ಪುರಸ್ಕರಿಸಲ್ಪಟ್ಟಳು.
42 ನೇ ವಯಸ್ಸಿನಲ್ಲಿ, ಬಿಡುಗಡೆಯ ಮೊದಲ ದಿನದಲ್ಲಿಯೇ ತನ್ನ ಹೊಸ ಪುಸ್ತಕದ 11 ಮಿಲಿಯನ್ ಪ್ರತಿಗಳನ್ನು ಮಾರಾಟವಾದ ದಾಖಲೆಗೆ ಪಾತ್ರಳಾದಳು.
ಈ ಮಹಿಳೆ ಜೆ.ಕೆ. ರೌಲಿಂಗ್.
30 ನೇ ವಯಸ್ಸಿನಲ್ಲಿ ಅವಳು ಆತ್ಮಹತ್ಯೆ ಮಾಡಿಕೊಳ್ಳಲು ನಿಶ್ಚಯಿಸಿದ್ದಳು ಎಂಬುದು ನೆನಪಿದೆಯೇ?
ಇಂದು ಜೆ.ಕೆ ರೌಲಿಂಗ್ ರವರ ‘ಹ್ಯಾರಿ ಪಾಟರ್ $15 ಬಿಲಿಯನ್ ಡಾಲರ್ಗಿಂತಲೂ ಹೆಚ್ಚು ಮೌಲ್ಯದ ಜಾಗತಿಕ ಬ್ರಾಂಡ್ ಆಗಿದೆ.
ಕೆಲವೊಂದು ಕಷ್ಟಗಳು ಮನುಷ್ಯನನ್ನು ಗಟ್ಟಿಗನನ್ನಾಗಿಸಿ, ಅವರ ಸಾಧನೆಗೆ ಅಡಿಪಾಯ ಹಾಕುತ್ತವೆ. ಕಷ್ಟದ ಕಾಲದಲ್ಲಿ ಎದೆಗುಂದದೆ ಪರಿಸ್ಥಿತಿಯನ್ನು ಎದುರಿಸಬೇಕಷ್ಟೆ. ನಮ್ಮ ಪ್ರತಿಭೆ, ಪರಿಶ್ರಮವನ್ನು ಮರೆಯದೆ ಅದನ್ನು ಬಳಸಿ ಬೆಳಯುವ ಪ್ರಯತ್ನ ಮಾಡಬೇಕಷ್ಟೆ!


More Stories
ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ತಳಮಟ್ಟದ ನಾಯಕತ್ವ ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ಸಮಾರೋಪ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.
ರಕ್ಷಾ ಬಂಧನದ ರಾಖಿ: ಅದರ ಅರ್ಥ ಮತ್ತು ಮಹತ್ವ
ಥೈರಾಯ್ಡ್ಗೆ ಶಾಶ್ವತ ಪರಿಹಾರ